Friday, June 27, 2025
spot_imgspot_img
spot_imgspot_img

ಗಣೇಶ ವಿಸರ್ಜನೆ ವೇಳೆ ಚಾಕು ಇರಿತ: ಯುವಕ ಸಾವು

- Advertisement -
- Advertisement -
astr

ಗಣೇಶ ವಿಸರ್ಜನೆ ವೇಳೆ ಚಾಕು ಇರಿದು ಯುವಕ ಸಾವನ್ನಪ್ಪಿರುವಂತಹ ಘಟನೆ ಗದಗ ತೋಂಟದಾರ್ಯ ಮಠದ ಬಳಿ ತಡರಾತ್ರಿ ನಡೆದಿದೆ. ಸ್ನೇಹಿತರೇ ಹಲ್ಲೆ ಮಾಡಿ ಚಾಕು ಇರಿದಿದ್ದಾರೆ ಎನ್ನಲಾಗಿದೆ.

ಕೊಲೆಯಾದ ಯುವಕನನ್ನು ಸುದೀಪ್ ಮುಂಡೆವಾಡಿ(22) ಎಂದು ತಿಳಿದುಬಂದಿದೆ. ಸ್ನೇಹಿತರೇ ಹಲ್ಲೆ ಮಾಡಿ ಚಾಕು ಇರಿದಿರುವ ಆರೋಪ ಮಾಡಿದ್ದು, ತೀವ್ರ ರಕ್ತಸ್ರಾವದಿಂದ ಆಸ್ಪತ್ರೆಯಲ್ಲಿ ಸುದೀಪ್ ಸಾವನ್ನಪ್ಪಿದ್ದಾನೆ. ಸುದೀಪ್​​ ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಗದಗ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನೂ ಈ ವೇಳೆ ಗದಗ ಟಾಂಗಾಕೂಟ ಸರ್ಕಲ್​ನಲ್ಲಿ ತಡರಾತ್ರಿ ಹೈಡ್ರಾಮಾ ನಡೆದಿದ್ದು, ಘಟನೆ ಬಳಿಕ ಡಿಜೆ ಬಂದ್​​ಗೆ ಪೊಲೀಸ್ ಇಲಾಖೆ ಸೂಚನೆ ನೀಡಿದ್ದು, ಡಿಜೆಗೆ ಅನುಮತಿ ನೀಡುವಂತೆ ಕಾರ್ಯಕರ್ತರು SP ಹಾಗೂ ಹಿಂದೂ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ. ರಾತ್ರಿ 1 ಗಂಟೆಯಾಗಿದೆ ಡಿಜೆ ಬಂದ್ ಮಾಡಿ ಎಂದು SP ಹೇಳಿದ್ದು, ಡಿಜೆಗೆ ಅನುಮತಿ ನೀಡಬೇಕು ಎಂದು SP ಜತೆ ವಾಗ್ವಾದ ಮಾಡಿದ್ದಾರೆ. ಬಳಿಕ ಡಿಜೆ ಹಾಕಿ ಕಾರ್ಯಕರ್ತರು ಮೆರವಣಿಗೆ ಮಾಡಿದರು.

- Advertisement -

Related news

error: Content is protected !!