ಮಂಗಳೂರು: ಮಂಗಳೂರು ನಗರದಲ್ಲಿ NIA ದಾಳಿ ಅಂತ್ಯಗೊಂಡಿದ್ದೆ. ಸ್ಟೇಟ್ ಬ್ಯಾಂಕ್ ನ ನೆಲ್ಲಿಕಾಯಿ ರಸ್ತೆ ಬಳಿ ಇರುವ ಎಸ್ಡಿಪಿಐ, ಪಿಎಫ್ಐ ಕಛೇರಿಯ ಮೇಲೆ ಎನ್ಐಎ ನಡೆಸಿದ್ದ ದಾಳಿ ಅಂತ್ಯ ಕಂಡಿದ್ದು ಕೆಲ ದಾಖಲೆ ಪತ್ರಗಳನ್ನು ಮತ್ತು ಮೂವರನ್ನು ಅಧಿಕಾರಿಗಳು ವಶಕ್ಕೆ ಪಡೆದು ತೆರಳಿದ್ದಾರೆ.
ಪಿಎಫ್ಐ ಮುಖಂಡರಾದ ಅಶ್ರಫ್ ಎ.ಕೆ, ಮೊಯಿದ್ದೀನ್ ಹಳೆಯಂಗಡಿ, ನವಾಜ್ ಕಾವೂರು ಎಂಬವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ಈ ಬಗ್ಗೆ ಮಾತನಾಡಿರುವ ಎಸ್ಡಿಪಿಐ ಜಿಲ್ಲಾಧ್ಯಕ್ಷ ಅಬೂಬಕ್ಕ ರ್ ಕುಳಾಯಿ ‘ಎನ್ಐಎ ಅಧಿಕಾರಿಗಳು ಮುಂಜಾನೆ 3.30ರ ವೇಳೆಗೆ ಪೊಲೀಸ್ ಭದ್ರತೆಯೊಂದಿಗೆ ಕಛೇರಿಗಳಿಗೆ ದಾಳಿ ನಡೆಸಿ ತಪಾಸಣೆ ನಡೆಸಿದ್ದಾರೆ ಕಛೇರಿಯಲ್ಲಿ ಬಳಕೆ ಮಾಡುವ ಲ್ಯಾಪ್ ಟಾಪ್ ತೆಗೆದುಕೊಂಡು ಹೋಗಿದ್ದಾರೆ. ನಮ್ಮ ಪಕ್ಷಕ್ಕೆ ಸಂಬಂಧಿಸಿದ ಕೆಲವು ಫೋಟೋಗಳನ್ನು ವಶಕ್ಕೆ ಪಡೆದುಕೊಂಡು ಹೋಗಿದ್ದಾರೆ. ಎನ್ಐಎ ಅಧಿಕಾರಿಗಳು ಪಿಎಫ್ಐ ಕಛೇರಿಗೆ ದಾಳಿ ಮಾಡುವ ಸಲುವಾಗಿ ಬಂದಿದ್ದರು ಆದರೆ ನಮ್ಮ ಕಛೇರಿಯೂ ಹತ್ತಿರದಲ್ಲಿ ಇದ್ದ ಕಾರಣ ನಮ್ಮ ಕಛೇರಿ ಮೇಲು ದಾಳಿ ಮಾಡಿದ್ದಾರೆ. ಕಚೇರಿಯಲ್ಲಿ ಯಾವುದೇ ದಾಖಲೆಗಳು ಪತ್ತೆಯಾಗಿಲ್ಲ. ಕಛೇರಿ ಕಟ್ಟಡದ ಬಾಡಿಗೆ ಅಗ್ರಿಮೆಂಟ್ ದಾಖಲೆ ಪಡೆದುಕೊಂಡು ಹೋಗಿದ್ದಾರೆ ಹೊರತು ಯಾವುದೇ ದಾಖಲೆಗಳನ್ನು ವಶಪಡಿಸಿಕೊಂಡಿಲ್ಲ’ ಎಂದು ಸ್ಪಷ್ಟ ಪಡಿಸಿದ್ದಾರೆ.