Friday, June 27, 2025
spot_imgspot_img
spot_imgspot_img

ಮಂಗಳೂರು: ಬೇರೆಯವರ ಪಾಸ್‌ಪೋರ್ಟ್‌ ಬಳಸಿ ದುಬೈಗೆ ಹಾರುವ ಪ್ರಯತ್ನ; ಬಂಟ್ವಾಳ ಮೂಲದ ಬದ್ರುದ್ದೀನ್ ಅಂದರ್..!

- Advertisement -
- Advertisement -
astr

ಮಂಗಳೂರು: ಬೇರೆಯವರ ಪಾಸ್‌ಪೋರ್ಟ್‌ ಬಳಸಿ ವಿದೇಶಕ್ಕೆ ತೆರಳಲು ಪ್ರಯತ್ನಿಸಿದ್ದ ಆರೋಪಿಗೆ ಮಂಗಳೂರು ನ್ಯಾಯಾಲಯವು ಜೈಲು ಶಿಕ್ಷೆ ವಿಧಿಸಿದೆ.

ಶಿಕ್ಷೆಗೊಳಗಾದ ಅಪರಾಧಿಯನ್ನು ಬಂಟ್ವಾಳ ಸರಪಾಡಿ ಗ್ರಾಮದ ನಿವಾಸಿ ಬದ್ರುದ್ದೀನ್ ಎನ್ನಲಾಗಿದೆ. 2010ರ ಫೆ.2ರಂದು ಹಸೈನಾರ್‌ಗೆ ಸೇರಿದ ಪಾಸ್‌ಪೋರ್ಟ್‌ನಲ್ಲಿ ದುಬೈಗೆ ಹೋಗಲು ಯತ್ನಿಸಿದ್ದ. ಈ ಪಾಸ್‌ಪೋರ್ಟ್ ಅನ್ನು ಅಬ್ಬಾಸ್ ಅವರು ಬದ್ರುದ್ದೀನ್‌ಗೆ ನೀಡಿದ್ದರು.

ಇಮಿಗ್ರೇಷನ್‌ ಅಧಿಕಾರಿ ಕೆ.ಎಂ. ಚಂದ್ರಶೇಖರ್‌ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಬಜಪೆ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ವಿಚಾರಣೆ ನಡೆಸಿದ 1ನೇ ಹೆಚ್ಚುವರಿ ಸಿ.ಜೆ.ಎಂ. ನ್ಯಾಯಾಲಯದ ನ್ಯಾಯಾಧೀಶೆ ಶಿಲ್ಪಾ ಅವರು ಸೆ. 28ರಂದು 1ನೇ ಆರೋಪಿ ಬದ್ರುದ್ದೀನ್‌ಗೆ 1 ವರ್ಷ ಜೈಲು ಮತ್ತು 15 ಸಾವಿರ ರೂ. ದಂಡವನ್ನು ವಿಧಿಸಿದ್ದು, 2ನೇ ಆರೋಪಿ ಬಂಟ್ವಾಳ ಮಂಚಿ ಗ್ರಾಮದ ಅಬ್ಟಾಸ್‌ ಅವರನ್ನು ಖುಲಾಸೆಗೊಳಿಸಲಾಗಿದೆ

- Advertisement -

Related news

error: Content is protected !!