Monday, June 30, 2025
spot_imgspot_img
spot_imgspot_img

ಮಂಗಳೂರು: ಶಾಸಕ ಹರೀಶ್‌ ಪೂಂಜಾರ ಕಾರು ಅಡ್ಡಗಟ್ಟಿ ಬೆದರಿಕೆ ಪ್ರಕರಣ; ಕೇಸನ್ನು ಸಿಐಡಿಗೊಪ್ಪಿಸಲು ರಾಜ್ಯ ಸರ್ಕಾರ ಆದೇಶ

- Advertisement -
- Advertisement -
vtv vitla

ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರು ಬೆನ್ನತ್ತಿ ಅಡ್ಡಗಟ್ಟಿ ಬೆದರಿಕೆ ಒಡ್ಡಿ, ತಲವಾರು ಝಳಪಿಸಿದ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಲು ಸರ್ಕಾರ ಆದೇಶಿಸಿದೆ.

ಪ್ರಕರಣ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿತ್ತು. ಇದೀಗ ತತ್‌ಕ್ಷಣದಿಂದಲೇ ಅನ್ವಯವಾಗುವಂತೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ಸರ್ಕಾರ ಆದೇಶಿಸಿದೆ. ಪ್ರಸ್ತುತ ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಯಲ್ಲಿರುವ ಎಲ್ಲಾ ದಾಖಲೆಗಳನ್ನು ಸಿಐಡಿ ಕಚೇರಿಗೆ ದ.ಕ. ಜಿಲ್ಲಾ ಪೊಲೀಸ್ ಅಧಿಕಾರಿಗಳು ಹಸ್ತಾಂತರ ಮಾಡಬೇಕು ಎಂದು ರಾಜ್ಯ ಡಿಜಿಪಿಯವರ ಪರವಾಗಿ ಆರ್‌. ಹಿತೇಂದ್ರ ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಅ. 13ರಂದು ರಾತ್ರಿ ಶಾಸಕ ಹರೀಶ್ ಪೂಂಜಾ ಅವರು ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿ ಬಳಿಕ ಮಂಗಳೂರಿನಿಂದ ಬೆಳ್ತಂಗಡಿಗೆ ಕಾರಿನಲ್ಲಿ ತೆರಳುತ್ತಿದ್ದ. ರಾತ್ರಿ 11.15ರ ವೇಳೆಗೆ ಫರಂಗಿಪೇಟೆ ಬಳಿ ದುಷ್ಕರ್ಮಿಗಳು ಶಾಸಕರ ಕಾರನ್ನು ಅಡ್ಡಗಟ್ಟಿ ನಿಂದಿಸಿ ಬಳಿಕ ತಲವಾರು ಝಳಪಿಸಿದ್ದ. ಜೀವ ಬೆದರಿಕೆಯನ್ನೂ ಒಡ್ಡಿದ್ದ ಎಂದು ಆರೋಪಿಸಿ ಶಾಸಕರ ಕಾರು ಚಾಲಕ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಮೇರೆಗೆ ಫಳ್ನೀರ್‌ನ ರಿಯಾಜ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು.

- Advertisement -

Related news

error: Content is protected !!