Sunday, June 29, 2025
spot_imgspot_img
spot_imgspot_img

ಕರ್ನಾಟಕ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ. ದ.ಕ ಜಿಲ್ಲೆಯಲ್ಲಿ ಎರಡು ದಿನ ರೆಡ್ ಅಲರ್ಟ್ ಘೋಷಣೆ

- Advertisement -
- Advertisement -

ಮಂಗಳೂರು:- ಕರ್ನಾಟಕ ಕರಾವಳಿಯಲ್ಲಿ ಇಂದು ಹಲವು ದಿನಗಳ ಬಳಿಕ ಭಾರೀ ಮಳೆ ಆಗುತ್ತಿದ್ದು ,ಇಂದು ಆರೆಂಜ್ ಅಲರ್ಟ್ ಘೋಷಿಸಿಲಾಗಿದೆ.ನಾಳೆ ಇಂದಿಗಿಂತಲೂ ಭಾರಿ ಪ್ರಮಾಣದಲ್ಲಿ ಮಳೆ ಆಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯಲ್ಲಿ ಎರಡು ದಿನ ರೆಡ್ ಅಲರ್ಟ್ ಘೋಷಿಸಲಾಗಿದೆ.


 
ಕರಾವಳಿ ತೀರದಲ್ಲಿ ಭಾರಿ ವೇಗದಲ್ಲಿ ಗಾಳಿ ಬೀಸುತ್ತಿದ್ದು ,ಬಿರುಗಾಳಿಯ ವಾತವರಣ ಇದೆ. ಮಂಗಳೂರಿನಿಂದ ಕಾರವಾರ ದವರೆಗೆ ಸಮುದ್ರದಲ್ಲಿ ಭಾರಿ ಅಲೆಗಳು ಏಳುತ್ತಿದ್ದು,ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ವಿದ್ಯುತ್ ಕಂಬಗಳು,ಮರ, ಕಟ್ಟಡಗಳ ಕೆಳಗೆ ನಿಲ್ಲದಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನದಲ್ಲಿರುವಂತೆ ತಿಳಿಸಲಾಗಿದೆ.ಯಾವುದೇ ವಿಪತ್ತು ಸಂದರ್ಭದಲ್ಲಿ ತಕ್ಷಣ ಸ್ಪಂದಿಸುವುದು ಹಾಗೂ ಮೇಲಾಧಿಕಾರಿಗಳಿಗೆ ಮಾಹಿತಿ ನೀಡುವುದು. ಮತ್ತು ತುರ್ತು ಸೇವೆಗಾಗಿ ಟೋಲ್ ಫ್ರೀ ಸಂಖ್ಯೆ-1077 ಹಾಗೂ 9483908000 ಸಂರ್ಪಕಿಸ ಬಹುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮನವಿ ಮಾಡಿದ್ದಾರೆ.

- Advertisement -

Related news

error: Content is protected !!