
ಭಾರತ್ ಜೋಡೋ ಯಾತ್ರೆ ಮಧ್ಯಪ್ರದೇಶಕ್ಕೆ ಪ್ರವೇಶಕ್ಕೆ ಮುನ್ನ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಕೊಲೆ ಬೆದರಿಕೆ ಬಂದಿರುವ ಬಗ್ಗೆ ವರದಿಯಾಗಿದೆ. ರಾಹುಲ್ ಗಾಂಧಿ ಅವರಿಗೆ ಮಧ್ಯಪ್ರದೇಶದ ಇಂದೋರ್ನಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
ಜುನಿ ಪೊಲೀಸ್ ಠಾಣೆ ವ್ಯಾಪ್ತಿಯ ಇಂದೋರ್ನ ಸಿಹಿತಿಂಡಿ ಅಂಗಡಿಯೊಂದರ ಹೊರಗೆ ರಾಹುಲ್ ಗಾಂಧಿಯನ್ನು ಕೊಲ್ಲುವುದಾಗಿ ಬೆದರಿಕೆ ಪತ್ರವೊಂದು ಪತ್ತೆಯಾಗಿದೆ. ಪೊಲೀಸರು ಆ ಪ್ರದೇಶದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ಮಾಡಲು ಪ್ರಾರಂಭಿಸಿದ್ದಾರೆ ಮತ್ತು ಪತ್ರವನ್ನು ಸಿಹಿತಿಂಡಿ ಅಂಗಡಿಯ ಹೊರಗೆ ಬಿಟ್ಟುಹೋದ ವ್ಯಕ್ತಿಯನ್ನು ಹುಡುಕುತ್ತಿದ್ದಾರೆ.

ಇದೀಗ ಅಪರಿಚಿತ ವ್ಯಕ್ತಿಯ ವಿರುದ್ಧ ಸೆಕ್ಷನ್ 507 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಹುಲ್ ಗಾಂಧಿ ಅವರು ಸಾವರ್ಕರ್ ಗೆ ಬಗ್ಗೆ ಹೇಳಿಕೆ ಕೊಟ್ಟ ಒಂದು ದಿನದ ನಂತರ ಬೆದರಿಕೆ ಪತ್ರ ಬಂದಿದೆ, ಅವರು ಬ್ರಿಟಿಷ್ ಆಡಳಿತಗಾರರಿಗೆ ಸಹಾಯ ಮಾಡಿದ್ದಾರೆ ಮತ್ತು ಭಯದಿಂದ ಅವರಿಗೆ ಕ್ಷಮಾದಾನ ಅರ್ಜಿಯನ್ನು ಬರೆದಿದ್ದಾರೆ ಎಂದು ಹೇಳಿದ್ದರು.
- ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಅಣ್ಣಾಮಲೈ ಭೇಟಿ
- ದ.ಕ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಗಣಿಗಾರಿಕೆಯ ಪರವಾನಿಗೆ ಮತ್ತು ರಾಜಸ್ವ ತೆರಿಗೆಯ ನಿಯಮ ಸಡಿಲಿಕೆಗೆ RGPRS ಅಧ್ಯಕ್ಷ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಒತ್ತಾಯ
- ಸುಳ್ಯ: ನಿಯಂತ್ರಣ ತಪ್ಪಿ ರಸ್ತೆ ಬದಿ ಚರಂಡಿಗೆ ಬಿದ್ದ ಕೆಎಸ್ಆರ್ಟಿಸಿ ಬಸ್
- ಅಂಟಿಲ್ಲದ ಬದುಕಿನಿಂದ ನೆಂಟನಾಗಿ ಸಾಗಿದ – ಯಲ್. ಯನ್. ಕೂಡೂರು ಜಗದ ಜಂಜಾಟದಿಂದ ದೂರ ಸಾಗಿದ ಚೇತನಕ್ಕೆ ವರ್ಷದ ನಮನ -🖊️ರಾಧಾಕೃಷ್ಣ ಎರುಂಬು
- ಪೇಸ್ ಬುಕ್ ನಲ್ಲಿ ಜೈನ ಧರ್ಮದ ಸ್ವಾಮೀಜಿಗೆ ಹಾಗೂ ಪ್ರಧಾನ ಮಂತ್ರಿಗಳ ಗೌರವಕ್ಕೆ ದಕ್ಕೆ ಉಂಟು ಮಾಡುವ ರೀತಿಯಲ್ಲಿ ಕಮೆಂಟ್- ಪ್ರಕರಣ ದಾಖಲು
