- Advertisement -
- Advertisement -
ಪುತ್ತೂರು: ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿಯಲ್ಲಿರುವ ನಿರ್ಮಾಣ ಹಂತದ ಕಟ್ಟಡದ ಬಳಿ ಡಿ.1ರಂದು ರಾತ್ರಿ ಒಡಹುಟ್ಟಿದ ತಮ್ಮನನ್ನು ಕೊಲೆಗೈದು ಪರಾರಿಯಾಗಿದ್ದ ಆರೋಪಿ ಅಣ್ಣನನ್ನು ಪುತ್ತೂರು ನಗರ ಠಾಣಾ ಪೊಲೀಸರು ಹಾವೇರಿ ಜಿಲ್ಲೆಯಲ್ಲಿ ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದುಬಂದಿದೆ.
ಹಾವೇರಿ ಜಿಲ್ಲೆಯ ದೇವಿಹೊಸೂರು ನಿವಾಸಿ ಮಹದೇವ ಎಂಬವರು ಕೊಲೆಗೀಡಾದವರಾಗಿದ್ದು , ಅವರನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಅವರ ಅಣ್ಣ ನಿಂಗನ ಗೌಡ(58ವ) ಅವರನ್ನು ಹಾವೇರಿ ಜಿಲ್ಲೆಯಲ್ಲಿ ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ.
- Advertisement -