Monday, June 30, 2025
spot_imgspot_img
spot_imgspot_img

ಉಡುಪಿ: ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆ

- Advertisement -
- Advertisement -
vtv vitla

ಉಡುಪಿ: ಮೀನುಗಾರಿಕೆಗೆ ತೆರಳಿದ್ದ ಸಂದರ್ಭ ದೋಣಿ ಮುಳುಗಡೆಯಾದ ಘಟನೆ ಉಡುಪಿಯ ಉಚ್ಚಿಲದಲ್ಲಿ ನಡೆದಿದೆ.

ದೋಣಿ ಸಂಪೂರ್ಣ ಹಾನಿಗೀಡಾಗಿದೆ. ಮೀನುಗಾರರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಉಚ್ಚಿಲದ ನಿವಾಸಿ ವಿಮಲಾ ಸಿ ಪುತ್ರನ್ ಮಾಲಕತ್ವದ ಶ್ರೀ ಗಿರಿಜಾ ದೋಣಿಯಲ್ಲಿ ಇಂದು ಬೆಳಗಿನ ಜಾವ ಐದು ಗಂಟೆಯ ಸುಮಾರಿಗೆ 7 ಮಂದಿ ಮೀನುಗಾರಿಕೆಗೆ ತೆರಳಿದ್ದರು. ಚಂಡಮಾರುತದ ಪ್ರಭಾವದಿಂದಾಗಿ ಸಮುದ್ರ ಪ್ರಕ್ಷುಬ್ದಗೊಂಡು ದೋಣಿ ಮುಳುಗಿದೆ. ಮೀನುಗಾರಿಕೆ ನಡೆಸುತಿದ್ದ ದೋಣಿಗಳಲ್ಲಿ 7ಮಂದಿಯನ್ನು ರಕ್ಷಣೆ ಮಾಡಿದ್ದಾರೆ. ದೋಣಿಯಲ್ಲಿದ್ದ ಬಲೆ ಹಾಗೂ ಹೈಸ್ಪೀಡ್ ಇಂಜಿನ್ ಸಮುದ್ರ ಪಾಲಾಗಿದ್ದು , ದೋಣಿಗೆ ಹಾನಿ ಉಂಟಾಗಿದೆ.

ಘಟನೆಯಲ್ಲಿ ಸುಮಾರು ಆರೂವರೆ ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ ಎಂದು ಮಾಲೀಕರು ಪಡುಬಿದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಘಟನಾ ಸ್ಥ ಳಕ್ಕೆ ಕಾಪು ಶಾಸಕ ಲಾಲಾಜಿ ಮೆಂಡನ್ ಭೇಟಿ ನೀಡಿ ಪರಿಹಾರ ದೊರಕಿಸುವ ಭರವಸೆ ನೀಡಿದ್ದಾರೆ.

- Advertisement -

Related news

error: Content is protected !!