- Advertisement -
- Advertisement -
ಬೆಳ್ತಂಗಡಿ: ಗೂಡ್ಸ್ ರಿಕ್ಷಾ ಹಾಗೂ ಶಾಲಾ ಬಸ್ ಮುಖಾ ಮುಖಿ ಡಿಕ್ಕಿ ಹೊಡೆದಿದ್ದು, ಓರ್ವ ಸಾವನ್ನಪ್ಪಿ, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಬೆಳ್ತಂಗಡಿಯ ಮಲೆಬೆಟ್ಟು ವನದುರ್ಗಾ ದೇವಸ್ಥಾನದ ಬಳಿ ನಡೆದಿದೆ.
ಕೊಯ್ಯೂರಿನಿಂದ ಶಾಲಾ ಬಸ್ ಮಕ್ಕಳನ್ನು ಉಜಿರೆಗೆ ಕರದೊಯ್ಯುತ್ತಿದ್ದ ವೇಳೆ ಬೆಳ್ತಂಗಡಿಯಿಂದ ಕೊಯ್ಯೂರು ಕಡೆಗೆ ಹೋಗುತ್ತಿದ್ದ, ಗೂಡ್ಸ್ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ರಿಕ್ಷಾದಲ್ಲಿದ್ದ ರಝಾಕ್ ಸಾವನ್ನಪ್ಪಿದ್ದು, ಕುವೆಟ್ಟು ಗ್ರಾಮದ ಪಿಲಿಚಾಮುಂಡಿ ನಿವಾಸಿ ಹನೀಫ್, ಪಣಕಜೆ ನಿವಾಸಿ ಮೊಹಮ್ಮದ್ ಚಾಲಕ ಹನೀಫ್ ಗಂಭೀರ ಗಾಯಗೊಂಡಿದ್ದಾರೆ.
- Advertisement -