Monday, June 30, 2025
spot_imgspot_img
spot_imgspot_img

ಬಂಟ್ವಾಳ: ಗಂಡನನ್ನು ಕೊಂದು ಜೈಲು ಶಿಕ್ಷೆ ಅನುಭವಿಸಿದ ಮಹಿಳೆ ಅಪಘಾತಕ್ಕೆ ಬಲಿ

- Advertisement -
- Advertisement -

ಬಂಟ್ವಾಳ: ಪಾದಾಚಾರಿ ಮಹಿಳೆಯೋರ್ವಳಿಗೆ ದ್ವಿಚಕ್ರವಾಹನ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬಂಟ್ವಾಳ ಸಮೀಪದ ಪೆರ್ಲ ಚರ್ಚ್ ಬಳಿ ಸಂಜೆ ವೇಳೆ ನಡೆದಿದೆ.

ನಾವೂರ ನಿವಾಸಿ ಉಮಾವತಿ ಮೃತಪಟ್ಟ ಮಹಿಳೆ. ಉಮಾವತಿ ಅವರು ಪೆರ್ಲ ಅಂಗಡಿಯೊಂದಕ್ಕೆ ಹೋಗಿದ್ದು, ವಾಪಾಸು ಮನೆಗೆ ಹೋಗುವ ಸಂದರ್ಭದಲ್ಲಿ ರಸ್ತೆ ದಾಟುತ್ತಿದ್ದಾಗ ಬೈಕ್ ಸವಾರ ಡಿಕ್ಕಿ ಹೊಡೆದಿದ್ದಾನೆ.

ಡಿಕ್ಕಿಯ ತೀವ್ರತೆಗೆ ಮಹಿಳೆ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ. ಮಹಿಳೆ ಎರಡು ವರ್ಷಗಳ ಹಿಂದೆ ಗಂಡನನ್ನು ಕೊಂದು ಜೈಲು ಶಿಕ್ಷೆ ಅನುಭವಿಸಿದ್ದರು. ಸ್ಥಳಕ್ಕೆ ಟ್ರಾಪಿಕ್ ಎಸ್.ಐ.ಮೂರ್ತಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!