- Advertisement -
- Advertisement -



ಮಂಗಳೂರು: ಶಾಲೆಗೆ ತಯಾರಾಗಿ ಹೊರಟಿದ್ದ ವಿದ್ಯಾರ್ಥಿ ಹೃದಯಾಘಾತದಿಂದ ನಿಧನರಾಗಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ಮೊಹಮ್ಮದ್ ಹಸೀಮ್ (17) ಎಂದು ಗುರುತಿಸಲಾಗಿದೆ.

ಬೆಳಿಗ್ಗೆ ಎಂದಿನಂತೆ ಶಾಲೆಗೆ ತೆರಳಲು ಸಿದ್ದನಾಗಿದ್ದ ಹಸೀಮ್ಗೆ ಏಕಾಏಕಿ ತಲೆ ಸುತ್ತು ಬಂದು ಬಿದ್ದಿದ್ದು, ಮನೆಮಂದಿ ತಕ್ಷಣ ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಲ್ಲಿ ಮೃತಪಟ್ಟಿರುವ ಬಗ್ಗೆ ವೈದ್ಯರು ತಿಳಿಸಿದ್ದು, ಬದುಕುಳಿಯುವ ಆಸೆಯಿಂದ ಪೋಷಕರು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ದುರದೃಷ್ಟವಶಾತ್ ಆದಾಗಲೇ ಬಾಲಕ ಕೊನೆಯುಸಿರೆಳೆದಿದ್ದ. ಅಬ್ದುಲ್ ರೆಹಮಾನ್ ದಂಪತಿ ಮೂವರು ಪುತ್ರರಲ್ಲಿ ಮೃತ ಹಸೀಮ್ ಎರಡನೆಯವನಾಗಿದ್ದಾನೆ.
- ಪಾರ್ಟ್ಟೈಮ್ ಕೆಲಸದ ಆಮಿಷ: ಹಣ ಪಡೆದು ವಂಚನೆ; ಪ್ರಕರಣ ದಾಖಲು
- ಒಂದೇ ಕ್ಷಣದಲ್ಲಿ ಇಬ್ಬರು ಮಕ್ಕಳನ್ನು ಕಳೆದುಕೊಂಡ ಕುಟುಂಬ; ಕೆರೆಗೆ ಬಿದ್ದು ಅವಳಿ ಮಕ್ಕಳ ಸಾವು
- ದಾಖಲೆ ಇಲ್ಲದೇ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್: ಎಂಆರ್ಪಿಎಲ್ ಉದ್ಯೋಗಿ ಸೇರಿ ಇಬ್ಬರ ವಿರುದ್ಧ ಎಫ್ಐಆರ್, ಇಬ್ಬರು ಕಾನ್ಸ್ಟೇಬಲ್ ಅಮಾನತು
- ಸಂಚರಿಸುತ್ತಿದ್ದ ಲಾರಿ ಬೆಂಕಿಗಾಹುತಿ-ಡೀಸೆಲ್ ಸೋರಿಕೆಯಿಂದ ಅನಾಹುತ-ಶಿರಾಡಿ ಘಾಟ್ ನಲ್ಲಿ ನಡೆದ ಘಟನೆ
- ಮಂಗಳೂರಿನಲ್ಲಿ ನಡೆಯುವ ಕ್ಯಾಬೆನೆಟ್ ಸಭೆಗೆ ಮುನ್ನ ತಾಂತ್ರಿಕ ಸಮಸ್ಯೆಗಳಿಗೆ ಪರಿಹಾರ ಸಿದ್ಧಪಡಿಸಿ: ಮುಖ್ಯಮಂತ್ರಿ ಡಿಕೆಶಿ ಸೂಚನೆ
- Advertisement -








