Monday, June 30, 2025
spot_imgspot_img
spot_imgspot_img

ಕಾಸರಗೋಡು: ರೈಲು ಡಿಕ್ಕಿಯಾಗಿ ಕರಾವಳಿ ಪೊಲೀಸ್‌ ಠಾಣೆಯ ವಾಹನ ಚಾಲಕ ಮೃತ್ಯು

- Advertisement -
- Advertisement -
vtv vitla

ಕಾಸರಗೋಡು: ರೈಲು ಡಿಕ್ಕಿಯಾಗಿ ಕುಂಬಳೆ ಕರಾವಳಿ ಪೊಲೀಸ್ ಠಾಣೆಯ ವಾಹನ ಚಾಲಕ ಮೃತಪಟ್ಟ ಘಟನೆ ಉಪ್ಪಳದಲ್ಲಿ ನಡೆದಿದೆ. ಕುಂಬಳೆ ಕರಾವಳಿ ಪೊಲೀಸ್ ಠಾಣೆಯ ಚಾಲಕ ಉಣ್ಣಿ ಕೃಷ್ಣನ್(28) ಮೃತಪಟ್ಟವರು.

ಉಪ್ಪಳ ರೈಲು ನಿಲ್ದಾಣದಲ್ಲಿ ಇಳಿದು ಮುಸೋಡಿಯಲ್ಲಿರುವ ಕರಾವಳಿ ಪೊಲೀಸ್ ಠಾಣೆಗೆ ರೈಲು ಹಾಲಿ ಮೂಲಕ ನಡೆದುಕೊಂಡು ಹೋಗುತ್ತಿದ್ದಾಗ ಮಂಗಳೂರು ಕಡೆಯಿಂದ ಬರುತ್ತಿದ್ದ ರೈಲು ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ಯುವಕನನ್ನು ನಾಗರಿಕರು ಉಪ್ಪಳದ ಆಸ್ಪತ್ರೆಗೆ ತಲಪಿಸಿದರೂ ಆಗಲೇ ಮೃತಪಟ್ಟಿದ್ದರು.

ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

- Advertisement -

Related news

error: Content is protected !!