Saturday, June 28, 2025
spot_imgspot_img
spot_imgspot_img

ಕುಂದಾಪುರ: ವಿದ್ಯಾರ್ಥಿ ಮೇಲೆ ಹರಿದ ಬಸ್ಸು; ಸ್ಥಳದಲ್ಲೇ ದಾರುಣ ಸಾವು

- Advertisement -
- Advertisement -

ಕುಂದಾಪುರ: ಬಸ್‌ ಫೂಟ್‌ಬೋರ್ಡ್‌ ಮೇಲೆ ನಿಂತು ಕಾಲೇಜಿಗೆ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಯೋರ್ವ ಇಳಿಯುವ ಸಂದರ್ಭ ಆಯತಪ್ಪಿ ಬಸ್‌ನ ಕೆಳಗೆ ಬಿದ್ದು ಚಕ್ರದಡಿ ಸಿಲುಕಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ ಘಟನೆ ಹೆಮ್ಮಾಡಿಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.

ಹೆಮ್ಮಾಡಿ ಸಮೀಪದ‌ ಕಟ್ ಬೇಲ್ತೂರು ನಿವಾಸಿ, ಕೋಟೇಶ್ವರ ಕಾಗೇರಿ ಕಾಲೇಜಿನ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿ ಸುದೀಪ್ (20) ಸಾವನ್ನಪ್ಪಿದ ದುರ್ದೈವಿ.

ಬೆಳಿಗ್ಗೆ ಸಾಗರದಿಂದ ಕುಂದಾಪುರಕ್ಕೆ ತೆರಳುವ ಖಾಸಗಿ ಬಸ್ ನಲ್ಲಿ ಸುದೀಪ್ ಸಂಚರಿಸುತ್ತಿದ್ದಾಗ ಈ ಅವಘಡ ನಡೆದಿದೆ. ಹೆಮ್ಮಾಡಿ ಜಂಕ್ಷನ್ ಹಿಂದಿನ ನಿಲ್ದಾಣವಾದ ಕಟ್ ಬೇಲ್ತೂರಿನಲ್ಲಿ ಬಸ್ ಹತ್ತಿದ್ದ ಸುದೀಪ್ ಬಸ್ ನೊಳಗೆ ಜನ ಹಾಗೂ ವಿದ್ಯಾರ್ಥಿಗಳು ತುಂಬಿದ್ದರಿಂದ ಫೂಟ್ ಬೋರ್ಡ್ ಮೇಲೆ ನಿಂತು ಸಾಗುತ್ತಿದ್ದರು. ಹೆಮ್ಮಾಡಿಯಲ್ಲಿ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸಿ ಮತ್ತೆ ಹತ್ತಿಸಿಕೊಳ್ಳಲಾಯಿತು. ಬಸ್ ಮತ್ತೆ ಚಲಿಸಲು ಪ್ರಾರಂಭಿಸುತ್ತಿದ್ದ ವೇಳೆ ಮಹಿಳೆಯೊಬ್ಬರು ಇಳಿಯದ ಹಿನ್ನೆಲೆ ಮತ್ತೆ ಅವರನ್ನು ಇಳಿಸಲು ಬಸ್ ನಿಲ್ಲಿಸುತ್ತಿದ್ದಾಗ ಸುದೀಪ್ ಹಠಾತ್ತನೆ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಬಸ್ ಗೆ ಮುಂಭಾಗದಲ್ಲಿ ಮಾತ್ರವೇ ಬಾಗಿಲಿದ್ದ ಕಾರಣ ಮುಂಬದಿಯ ಬಾಗಿಲಲ್ಲಿ ನಿಂತಿದ್ದ ಸುದೀಪ್ ಬಸ್ ನ ಮುಂಬದಿಯ ಚಕ್ರದಡಿಯಲ್ಲಿ ಸಿಲುಕಿದ್ದಾನೆ. ಚಾಲಕ ವಿದ್ಯಾರ್ಥಿಯನ್ನು ಉಳಿಸುವ ಪ್ರಯತ್ನ ನಡೆಸಿದರಾದರೂ ಸೊಂಟದ ಮೇಲೆ ಚಕ್ರ ಹರಿದ ಪರಿಣಾಮ ಗಂಭೀರ ಗಾಯಗೊಂಡ ಸುದೀಪ್ ಕೊನೆಯುಸಿರೆಳೆದಿದ್ದಾನೆ.

ಹೆಮ್ಮಾಡಿ, ತಲ್ಲೂರು ಭಾಗದ ಮಕ್ಕಳಿಗೆ ಕುಂದಾಪುರಕ್ಕೆ ತೆರಳಲು ಬಸ್ಸಿನಲ್ಲಿ ಜಾಗವೇ ಇಲ್ಲದಿರುವುದರಿಂದ‌ ಜೀವಭಯದಲ್ಲೇ ನೇತಾಡಿಕೊಂಡು ತೆರಳುವ ಅನಿವಾರ್ಯತೆ ಉಂಟಾಗಿದ್ದು, ಬೆಳಗ್ಗಿನ ವೇಳೆ ಹೆಚ್ಚುವರಿ ಬಸ್ ಒದಗಿಸಬೇಕು ಎನ್ನುವ ಬೇಡಿಕೆ‌ ಕೇಳಿಬಂದಿದೆ.

- Advertisement -

Related news

error: Content is protected !!