Friday, June 27, 2025
spot_imgspot_img
spot_imgspot_img

ಬೆಳ್ತಂಗಡಿ: ಬೈಕ್ – ಟಿಪ್ಪರ್ ಮುಖಾಮುಖಿ ಡಿಕ್ಕಿ; ಗಾಯಾಳು ಮೃತ್ಯು

- Advertisement -
- Advertisement -

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಗಾಯಾಳು ಚಿಕಿತ್ಸೆಗೆ ಚೇತರಿಸಿಕೊಳ್ಳದೆ ಅಸುನೀಗಿದ ಘಟನೆ ನಡೆದಿದೆ. ಮೃತ ಯುವಕನನ್ನು ಕೊಕ್ಕಡ ಸೌತಡ್ಕ ನಿವಾಸಿ ಸಿರಾಜ್ ಎಂದು ಗುರುತಿಸಲಾಗಿದೆ.

ಕೆಲ ದಿನಗಳ ಹಿಂದೆ ಟಿಪ್ಪರ್ ಮತ್ತು ಸಿರಾಜ್ ಸಂಚರಿಸುತ್ತಿದ್ದ ಬೈಕ್ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಸಮೀಪದ ಕೆಂಪಕೋಡಿ ಎಂಬಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮಸಿರಾಜ್ ಗಂಭೀರವಾಗಿ ಗಾಯಗೊಂಡಿದ್ದರು. ಸ್ಥಳೀಯರು ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅಪಘಾತದ ತೀವ್ರತೆಗೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸಿರಾಜ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

- Advertisement -

Related news

error: Content is protected !!