- Advertisement -
- Advertisement -
ಬಾರ್ನಲ್ಲಿ ಕ್ಯಾಶಿಯರ್ನ ಹತ್ಯೆ ಮಾಡಿರುವ ಘಟನೆ ನಡೆದಿದೆ. ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಂದು ಹಾಕಿರುವ ಘಟನೆ ಬೆಂಗಳೂರಿನ ಆರ್ಎಂಸಿ ಯಾರ್ಡ್ ಬಳಿ ನಡೆದಿದೆ. ಶೇಖರ್ ಬಾರ್ನ ಕ್ಯಾಶಿಯರ್ ಶಿವಕುಮಾರ್ ಕೊಲೆಯಾದ ವ್ಯಕ್ತಿ.
ಬಾರ್ ಕ್ಯಾಶಿಯರ್ ಶಿವಕುಮಾರ್ ನೊಂದಿಗೆ ಅಲ್ಲಿ ಕೆಲಸಕ್ಕಿದ ಮೂವರಿಂದ ಮಾತಿಗೆ ಮಾತು ಬೆಳೆದು ಪರಸ್ಪರ ಘರ್ಷಣೆ ಜೋರಾಗಿದ್ದು, ಅವಾಚ್ಯ ಶಬ್ಧದಿಂದ ನಿಂದನೆ ತಾರಕಕ್ಕೇರಿದೆ.
ಆ ಬಳಿಕ ಕರ್ಣ ಅಲಿಯಾಸ್ ಸಿದ್ದೋಜಿ ರಾವ್, ಗಿರೀಶ್, ಶೇಖರ್ ಸೇರಿ ಬಾರ್ನ ಕ್ಯಾಶಿಯರ್ ಶಿವಕುಮಾರ್ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದ್ದು, ಈ ಬಗ್ಗೆ ಆರ್ ಎಂ ಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -