- Advertisement -
- Advertisement -
ಭೂ-ಸುಧಾರಣೆ ತಿದ್ದುಪಡಿ ವಿರೋಧಿಸಿ ನಿನ್ನೆಯಿಂದ ನಗರದ ಫ್ರೀಡಂ ಪಾರ್ಕ್ನಲ್ಲಿ ರೈತರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.
ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಬಂದಿದ್ದ ರೈತರು ಒಂದಿಷ್ಟು ಅವ್ಯವಸ್ಥೆಗಳ ಮಧ್ಯೆ ಯಾವುದನ್ನೂ ಲೆಕ್ಕಿಸದೇ ತಮ್ಮ ಹೋರಾಟವನ್ನ ಮುಂದುವರಿಸಿದ್ದಾರೆ. ಊಟ, ವಸತಿ, ಶೌಚಾಲಯದ ವ್ಯವಸ್ಥೆ ಇಲ್ಲದೇ ಪ್ರತಿಭಟನೆ ನಡೆಸ್ತಿದ್ದಾರೆ. ಯಾವ ಸೌಕರ್ಯಗಳೂ ಇಲ್ಲದೆ ರೈತರು ಅಹೋರಾತ್ರಿ ಧರಣಿ ನಡೆಸುತ್ತಿದ್ರೂ, ಸರ್ಕಾರ ಮಾತ್ರ ಸ್ಪಂದಿಸುತ್ತಿಲ್ಲ. ಆದರೆ, ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ಪ್ರತಿಭಟನೆ ನಿಲ್ಲಿಸಲ್ಲ ಅಂತ ರೈತರು ಪಟ್ಟು ಹಿಡಿದಿದ್ದಾರೆ.
- Advertisement -