- Advertisement -
- Advertisement -


ಪ್ರೀತಿಸಿ ವಿವಾಹವಾದ ಮೂರೇ ದಿನಕ್ಕೆ ಪತ್ನಿಯನ್ನು ಬಿಟ್ಟು ಪತಿ ಪರಾರಿಯಾದ ಘಟನೆ ನಡೆದಿದೆ ಎಂದು ಆರೋಪಿಸಿ ಪತ್ನಿ ಕೆಆರ್ ಪುರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಧರಣಿ ಹಾಗೂ ಸುರೇಶ್ ಪರಸ್ಪರ ಪ್ರೀತಿಸಿ ಮದುವೆಯೂ ಆಗಿದ್ದರು. ಆದರೆ ಮದುವೆಯಾದ ಮೂರೇ ದಿನಕ್ಕೆ ಪತಿ ಸುರೇಶ್ ಇದ್ದಕ್ಕಿದ್ದಂತೆ ಪರಾರಿಯಾಗಿದ್ದಾನೆ. ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ತನಿಖೆ ಪ್ರಾರಂಭಿಸಿ ಸುರೇಶ್ನನ್ನು ವಿಚಾರಣೆ ಮಾಡಿದ್ದಾರೆ.
ಈ ಬಗ್ಗೆ ಮಾತನಾಡಿದ ಸುರೇಶ್, ನಾನು ಧರಣಿಯನ್ನು ಮದುವೆಯಾಗಿಲ್ಲ ನಾವಿಬ್ಬರು ಸ್ನೇಹಿತರಾಗಿದ್ದೆವು. ಅದು ಶಾರ್ಟ್ ಮೂವಿಗಾಗಿ ತೆಗೆದ ಫೋಟೋ ಆಗಿದೆ. ಅಲ್ಲದೇ 2016ರಲ್ಲಿ ಧರಣಿಗೆ ಮೊದಲ ವಿವಾಹ ಆಗಿತ್ತು. ನಂತರ ಪತಿಯನ್ನು ಬಿಟ್ಟು ದೂರವಾಗಿದ್ದರು ಎಂದು ಎಂದು ಪ್ರತಿಕ್ರಿಯೆ ನೀಡಿ ಆರೋಪಿಸಿದ್ದಾನೆ. ವಿಚಾರಕ್ಕೆ ಸಂಬಂಧಿಸಿ ಕೆ.ಆರ್. ಪುರಂ ಪೊಲೀಸ್ ಠಾಣಾಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.
- Advertisement -