Saturday, June 28, 2025
spot_imgspot_img
spot_imgspot_img

ಮಕ್ಕಳಾಗದ ಚಿಂತೆಯಲ್ಲಿ ಮನನೊಂದು ನೇಣಿಗೆ ಶರಣಾದ ಗೃಹಿಣಿ

- Advertisement -
- Advertisement -

ಮನೆಯಲ್ಲಿ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ನಗರದ ಮಿಳಘಟ್ಟ ಬಡಾವಣೆಯಲ್ಲಿ ನಡೆದಿದೆ. ಸಂಗೀತ (21) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ.

ಕಳೆದ ಎರಡು ವರ್ಷದ ಹಿಂದೆ ಮಿಳಘಟ್ಟದ ನಿವಾಸಿ ಗುರುಮೂರ್ತಿ‌ ಜೊತೆ ಸಂಗೀತ ವಿವಾಹವಾಗಿದ್ದರು. ಆದರೆ ಮಕ್ಕಳಾಗಿರಲಿಲ್ಲ ಎಂದು ಮಾನಸಿಕವಾಗಿ ಕೊರಗುತ್ತಿದ್ದಳು ಎನ್ನಲಾಗಿದೆ. ಸಂಗೀತ ಪತಿಯ ಸಹೋದರಿ ಇತ್ತೀಚೆಗೆ ಮದುವೆಯಾದ ಕೆಲವೇ ತಿಂಗಳಿಗೆ ಆಕೆ ಗರ್ಭಿಣಿಯಾಗಿದ್ದಳು. ಇದರಿಂದ ಬೇಸತ ಸಂಗೀತ ನೇಣಿಗೆ ಶರಣಾಗಿದ್ದಾಳೆ. ದೊಡ್ಡಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ‌ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!