Saturday, June 28, 2025
spot_imgspot_img
spot_imgspot_img

ಚಾರ್ಮಾಡಿ ಘಾಟ್‌ನಲ್ಲಿ ಕಂದಕಕ್ಕೆ ಉರುಳಿದ ಕಾರು; ಓರ್ವ ಮಹಿಳೆ ಮೃತ್ಯು, ನಾಲ್ವರು ಗಂಭೀರ

- Advertisement -
- Advertisement -

ಬೆಳ್ತಂಗಡಿ: ಕಾರೊಂದು ಚಾರ್ಮಾಡಿ ಘಾಟಿಯ ಎರಡನೇ ತಿರುವಿನ ಬಳಿ ಬ್ರೇಕ್ ಫೇಲ್ ಆಗಿ ನಿಯಂತ್ರಣ ತಪ್ಪಿದ ಪರಿಣಾಮ ಸುಮಾರು 100 ಮೀಟರ್ ಕೆಳಗಿನ ಕಂದಕಕ್ಕೆ ಉರುಳಿ ಬಿದ್ದು ಮಹಿಳೆಯೋರ್ವರು ಮೃತಪಟ್ಟ ಘಟನೆ ರಾತ್ರಿ ಸಂಭವಿಸಿದೆ.

ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ, ಉಜಿರೆ ನಿವಾಸಿ ಪುಷ್ಪಾವತಿ ಆರ್. ಶೆಟ್ಟಿ ಹಾಗೂ ಕುಟುಂಬಸ್ಥರು ಕೊಪ್ಪದಲ್ಲಿ ನಿಧನರಾಗಿದ್ದ ತಮ್ಮ ಸಂಬಂಧಿಕರ ಕಾರ್ಯಕ್ರಮಕ್ಕೆ ಹೋಗಿ ಹಿಂದಿರುಗುತ್ತಿರುವಾಗ ಕಾರು ಅಪಘಾತಕ್ಕೀಡಾಗಿದೆ. ಇನ್ನು ಪುಷ್ಪಾವತಿ ಆರ್.ಶೆಟ್ಟಿ ಅವರ ಕೈಗೆ ಗಂಭೀರ ಗಾಯವಾಗಿದ್ದು, ಪುತ್ರಿ ಪೂರ್ಣಿಮಾ ಶೆಟ್ಟಿ ಅವರ ತಲೆಗೆ ಗಂಭೀರ ಗಾಯವಾಗಿದೆ. ಮೊಮ್ಮಕ್ಕಳಾದ ಸಮೃದ್ಧ್ ಹಾಗೂ ಸಾಕ್ಷಿ ಅವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಸಂಬಂಧಿಕ ಮಹಿಳೆ ಸರೋಜಿನಿ ಶೆಟ್ಟಿ ಅವರ ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಚಾಲಕ ಸುರ್ಯ ರಸ್ತೆಯ ಅರುಣ್ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಕಕ್ಕಿಂಜೆಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪೂರ್ಣಿಮಾ ಹಾಗೂ ಸರೋಜಿನಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಯಿತು. ಈ ಪೈಕಿ ಸಂಬಂಧಿಕರಾದ ಸರೋಜಿನಿ ಶೆಟ್ಟಿ ಅವರು ತೀವ್ರ ಗಾಯಗೊಂಡು ಅಸ್ವಸ್ಥರಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟರಿವುದಾಗಿ ತಿಳಿದುಬಂದಿದೆ.

ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿದ್ದಾರೆ.

- Advertisement -

Related news

error: Content is protected !!