ಬೆಂಗಳೂರು ಭೂ-ಸುಧಾರಣೆ ಮತ್ತು ಎಪಿಎಂಸಿ ಖಾಯ್ದೆ ತಿದ್ದುಪಡಿ ಹಿಂಪಡೆಯುವಂತೆ ಒತ್ತಾಯಿಸಿ ನಡೆಯುತ್ತಿರುವ ರೈತ ಸಂಘಟನೆಗಳ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.
ಈ ಹಿನ್ನೆಲೆ ಪ್ರತಿಭಟನೆ ಕೈಬಿಡುವಂತೆ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ರೈತ ಸಂಘಟನೆಗಳ ಮುಖಡರೊಂದಿಗೆ ನಡೆಸಿದ ಸಭೆ ವಿಫಲವಾಗಿದೆ.
ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಜಮೀನು ಹೊಂದುವ ಮಿತಿ ಕಡಿಮೆ ಮಾಡುವ ಬಗ್ಗೆ ಮಾತ್ರ ಸಿಎಂ ರೈತ ಮುಖಂಡರಿಗೆ ಭರವಸೆ ನೀಡಿದರು. ಈ ಮೂಲಕ ಮುಖಂಡರ ಮನವೊಲಿಕೆಗೆ ಪ್ರಯತ್ನಿಸಿದರು.
ಆದರೆ ರೈತ ನಾಯಕರ ಬೇಡಿಕೆಗೆ ಮುಖ್ಯಮಂತ್ರಿಗಳಿಂದ ಸ್ಪಷ್ಟ ಭರವಸೆ ಸಿಗದ ಕಾರಣ ಸಭೆ ವಿಫಲವಾಗಿದ್ದು, ಸೆ.28ಕ್ಕೆ ಕರ್ನಾಟಕ ಬಂದ್ ನಡೆಸಲು ರೈತ ನಾಯಕರು ನಿರ್ಧರಿಸಿದ್ದಾರೆ. ಸಭೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ, ಕಂದಾಯ ಸಚಿವ ಆರ್.ಅಶೋಕ್ ಹಾಗೂ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಸೇರಿದಂತೆ ಹಲವರು ಭಾಗಿಯಾಗಿದ್ದರು.
ರೈತಸಂಘದ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ, ಯಡಿಯೂರಪ್ಪನವರು ಬಿಲ್ಗಳನ್ನು ವಾಪಸ್ ಪಡೆಯುವ ಬಗ್ಗೆ ಯಾವುದೇ ಭರವಸೆ ನೀಡಲಿಲ್ಲ. ಅವರು ಮೋದಿ ಮಾತು ಮೀರಲು ಸಿದ್ಧರಿಲ್ಲ, ನಾವು ಸೋಮವಾರ ಬಂದ್ನಡೆಸುತ್ತೇವೆ. ಎಲ್ಲರೂ ಬಂದ್ಗೆ ಬೆಂಬಲ ನೀಡಬೇಕು ಎಂದಿದ್ದಾರೆ.