Saturday, June 28, 2025
spot_imgspot_img
spot_imgspot_img

ಬೆಳ್ತಂಗಡಿ: ನಿಲ್ಲಿಸಿದ ಲಾರಿಗೆ ಬೈಕ್‌ ಡಿಕ್ಕಿ; ಓರ್ವ ಮೃತ್ಯು, ಮತ್ತೋರ್ವ ಗಂಭೀರ

- Advertisement -
- Advertisement -
vtv vitla

ಬೆಳ್ತಂಗಡಿ: ನಿಲ್ಲಿಸಿದ ಲಾರಿಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ನಲ್ಲಿದ್ದ ಓರ್ವ ಸಾವನ್ನಪ್ಪಿ, ಮತ್ತೋರ್ವ ಗಂಭೀರ ಗಾಯಗೊಂಡ ಶಕ್ತಿನಗರದ ಸರ್ಕಲ್ ಬಳಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಶಕ್ತಿನಗರ ಸರ್ಕಲ್ ಬಳಿ ಘಟನೆ ನಡೆದಿದ್ದು, ಮೃತಪಟ್ಟವರ ಬಗ್ಗೆ ಮಾಹಿತಿ ಅಲಭ್ಯವಾಗಿದ್ದು, ವಿಳಾಸ ಪತ್ತೆಗಾಗಿ ಬೆಳ್ತಂಗಡಿ ಸಂಚಾರಿ ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು ಬರಾಯದ ಲೋಕೇಶ್ ಗೌಡ ಎಂದು ಗುರುತಿಸಲಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತಪಟ್ಟ ವ್ಯಕ್ತಿಯ ದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲಾಗಿದ್ದು, ಅಪಘಾತ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!