Saturday, June 28, 2025
spot_imgspot_img
spot_imgspot_img

ಸುಳ್ಯ : ಕೊಲ್ಲಮೊಗ್ರದ ಯುವಕನೋರ್ವ ಬೆಂಗಳೂರಿನಲ್ಲಿ ಅಪಘಾತಕ್ಕೆ ಬಲಿ

- Advertisement -
- Advertisement -

ಸುಳ್ಯ : ಕೊಲ್ಲಮೊಗ್ರ ಯುವಕನೋರ್ವ ಬೆಂಗಳೂರಿನಲ್ಲಿ ಅಪಘಾತಕ್ಕೆ ಬಲಿಯಾದ ಘಟನೆ ಮಾ.24 ರಂದು ನಡೆದಿದೆ.

ಕೊಲ್ಲಮೊಗ್ರ ಧರ್ಮಪಾಲ ಗೌಡ ಬಾಳೆಬೈಲು ಮತ್ತು ವಿಮಲಾಕ್ಷಿ ದಂಪತಿ ಪುತ್ರ ಯತೀಶ್ ಬಾಳೆಬೈಲು ಮೃತಪಟ್ಟ ದುರ್ದೈವಿ.
ಎ.24 ರ ಬೆಳಿಗ್ಗೆ ಯತೀಶ್ ರವರು ಬೈಕ್ ನಲ್ಲಿ ಹೋಗುತ್ತಿದ್ದಾಗ ಕಾರೊಂದು ಡಿಕ್ಕಿ ಹೊಡೆದಿರುವುದು ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಯತೀಶ್‌ರವರು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತ ಪಟ್ಟಿರುವವುದಾಗಿ ತಿಳಿದು ಬಂದಿದೆ.

ಅವಿವಾಹಿತರಾಗಿರುವ ಯತೀಶ್ ಅವರು ಬೆಂಗಳೂರಿನ ವಿಮಾನ ನಿಲ್ದಾಣ ಬಳಿ ಉದ್ಯೋಗದಲ್ಲಿದ್ದು, ಅವರಿಗೆ ಸುಮಾರು 30ವರ್ಷ ವಯಸ್ಸಾಗಿತ್ತು. ಮೃತರು ತಂದೆ ತಾಯಿ, ಸಹೋದರ, ಸಹೋದರಿ, ಬಂಧುಮಿತ್ರರನ್ನು ಅಗಲಿದ್ದಾರೆ.

- Advertisement -

Related news

error: Content is protected !!