- Advertisement -
- Advertisement -
ವಿಟ್ಲ: ಕರ್ನಾಟಕ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದೆ. ಕೇಸರಿ ಪಾಳಯ ಬಹುಮತಗಳಿಂದ ಜಯಭೇರಿ ಸಾಧಿಸಲು ಸಕಲ ಪ್ರಯತ್ನ ಮಾಡುತ್ತಿದ್ದು ಸ್ಟಾರ್ ಪ್ರಚಾರಕರು ಮತಭೇಟೆಗೆ ಇಳಿದಿದ್ದಾರೆ.
ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಪರ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಬೃಹತ್ ರೋಡ್ ಶೋ ನಡೆಸಿದ್ದಾರೆ.
ವಿಟ್ಲದ ಬಿಜೆಪಿ ಕಛೇರಿಯಿಂದ ಹೊರಟ ಮೆರವಣಿಗೆ ಮುಖ್ಯ ರಸ್ತೆಗಳಲ್ಲಿ ಸಂಚರಿಸಿತು. ಈ ಸಂದರ್ಭ ಕಮಲ ಕೂಟದ ನಾಯಕರು ಜೊತೆಯಿದ್ದರು. ಸಹಸ್ರ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗಿಯಾಗಿದ್ದರು.
- Advertisement -