- Advertisement -
- Advertisement -
ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ಶನಿವಾರ ಪಕ್ಷದ ಹೊಸ ರಾಷ್ಟ್ರೀಯ ಪದಾಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಿ , ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರನ್ನು ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾದ ಅಧ್ಯಕ್ಷರನ್ನಾಗಿ ಘೋಷಣೆ ಮಾಡಲಾಗಿದೆ.

ತೇಜಸ್ವಿ ಸೂರ್ಯ ಅವರು ಚತುರ ವಾಕ್ಪಟುವಾಗಿದ್ದು, ಬಿಜೆಪಿ ಪಕ್ಷ ಇದೀಗ ಅವರನ್ನು ರಾಷ್ಟ್ರ ರಾಜಕಾರಣದಲ್ಲಿ ಬಳಕೆ ಮಾಡಿಕೊಳ್ಳಲು ಮುಂದಾಗಿದ್ದು, ಆ ಕಾರಣದಿಂದಲೇ ಅವರಿಗೆ ಮಹತ್ವದ ಸ್ಥಾನ ನೀಡಿದೆ ಎಂದು ಹೇಳಲಾಗುತ್ತಿದೆ..

ಸಿ.ಟಿ.ರವಿ ಅವರನ್ನು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ. ರಾಜೀವ್ ಚಂದ್ರಶೇಖರ್ ಅವರನ್ನು ಕೂಡ ರಾಷ್ಟ್ರೀಯ ಪದಾಧಿಕಾರಿಗಳಾಗಿ ನೇಮಕ ಮಾಡಲಾಗಿದೆ.ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಈ ಘೋಷಣೆ ಮಾಡಿದ್ದಾರೆ.

- Advertisement -