Sunday, June 29, 2025
spot_imgspot_img
spot_imgspot_img

ಕಾರು-ಬಸ್ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಮೃತ್ಯು

- Advertisement -
- Advertisement -

ಕಾರು ಹಾಗೂ ಕೆಎಸ್‍ಆರ್‌ಟಿಸಿ ಬಸ್ ನಡುವೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಹಪುರ ತಾಲೂಕಿನ ಮದ್ದರಕಿ ಬಳಿಯ ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ

ಅಪಘಾತದಲ್ಲಿ ಬಸ್ಸಿನಲ್ಲಿದ್ದ ಐದಾರು ಪ್ರಯಾಣಿಕರಿಗೆ ಗಾಯಗಳಾಗಿದ್ದು,ಬಳಿಕ ಚಾಲಕ ಬಸ್ ಬಿಟ್ಟು ಪರಾರಿಯಾಗಿದ್ದಾನೆ.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ರಂಗಂಪೇಟೆ ನಿವಾಸಿಗಳಾದ ಕೃಷಿ ಇಲಾಖೆಯ ಅಧಿಕಾರಿ ನಾಗರಾಜ ಸಜ್ಜನ್ (59), ಪತ್ನಿ ಮಹಾದೇವಿ (50) ಹಾಗೂ ಸಂಬಂಧಿ ರೇಣುಕಾ (45) ಎಂದು ಗುರುತಿಸಲಾಗಿದೆ.

ಕಲಬುರಗಿಯಲ್ಲಿ ಸಂಬಂಧಿಕರ ಮದುವೆಗೆ ಹೋಗಿದ್ದು, ಮದುವೆ ಮುಗಿಸಿ ವಾಪಸ್ ಬರುವಾಗ ಈ ಅವಘಡ ಸಂಭವಿಸಿದ್ದು,
ಸ್ಥಳಕ್ಕೆ ಭೀಮರಾಯನ ಗುಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!