- Advertisement -
- Advertisement -
ಸುಮಾರು 120 ಅಡಿ ಉದ್ದದ ತೇರು ನಿಯಂತ್ರಣ ತಪ್ಪಿ ನೆಲಕ್ಕುರುಳಿದ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹೀಲಲಿಗೆ ಗ್ರಾಮದಲ್ಲಿ ನಡೆದಿದೆ.
ನೂರಾರು ವರ್ಷಗಳ ಇತಿಹಾಸ ಪ್ರಸಿದ್ಧ ಹುಸ್ಕೂರು ಮದ್ದೂರಮ್ಮ ಜಾತ್ರೆಗೆ ಈ ತೇರು ಹೋಗುತ್ತಿದ್ದು, ಹತ್ತಾರು ಊರುಗಳಿಂದ ಹುಸ್ಕೂರಿನ ಮದ್ದೂರಮ್ಮ ಜಾತ್ರೆಗೆ ತೇರು ಬರುತ್ತವೆ. ಹೀಲಲಿಗೆ ಗ್ರಾಮದಿಂದ ಹುಸ್ಕೂರಿಗೆ ಬರುತ್ತಿದ್ದ ತೇರು ಕಮ್ಮಸಂದ್ರದ ಹೈಪರ್ ಮಾರ್ಕೆಟ್ ತಿರುವಿನಲ್ಲಿ ಉರುಳಿಬಿದ್ದಿದೆ.. ಅದೃಷ್ಟವಶಾತ್ ಘಟನೆಯಿಂದ ಯಾವುದೇ ಸಾವುನೋವು ಸಂಭವಿಸಿಲ್ಲ
- Advertisement -