- Advertisement -
- Advertisement -
ಸಲಿಂಗ ಕಾಮಕ್ಕೆ 6 ವರ್ಷದ ಬಾಲಕನೊಬ್ಬ ಬಲಿಯಾಗಿರುವ ಘಟನೆ ರಾಮನಗರದಲ್ಲಿ ನಡೆದಿದೆ.
ಯುವಕನೊಬ್ಬ ಬಸ್ ನಿಲ್ದಾಣದಲ್ಲಿದ್ದ 6 ವರ್ಷದ ಬಾಲಕನಿಗೆ ಬಿಸ್ಕೆಟ್ ಆಸೆ ತೋರಿಸಿ ಆತನನ್ನು ಯಾರು ಇಲ್ಲದ ಜಾಗಕ್ಕೆ ಕರೆದುಕೊಂಡು ಹೋಗಿದ್ದು, ಬಳಿಕ ತನ್ನ ಸಲಿಂಗ ಕಾಮಕ್ಕೆ ಬಳಸಿಕೊಂಡ ನಂತರ ಬಾಲಕನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.
ರಾಮನಗರ ರೈಲ್ವೆ ಹಳಿ ಹತ್ತಿರದಲ್ಲಿ ಬಾಲಕನ ಶವ ಪತ್ತೆಯಾಗಿದೆ.ಈ ಬಗ್ಗೆ ಪೊಲೀಸರು ತೀವ್ರ ತನಿಖೆ ಮಾಡಿದ ನಂತರ ಯುವಕನ ಕ್ರೂರ ಕೃತ್ಯ ಬಹಿರಂಗವಾಗಿದೆ ಎನ್ನಲಾಗಿದೆ.ಘಟನೆ ಬಗ್ಗೆ ರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
- Advertisement -