Monday, April 29, 2024
spot_imgspot_img
spot_imgspot_img

ಭತ್ತ ಕಟಾವು ಯಂತ್ರದ ಲಾರಿಗೆ ಬೈಕ್‌ ಡಿಕ್ಕಿ; ಮೂವರು ಮೃತ್ಯು..!

- Advertisement -G L Acharya panikkar
- Advertisement -

ಭತ್ತ ಕಟಾವು ಮಾಡುವ ಯಂತ್ರದ ಲಾರಿಗೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು ಮತ್ತೋರ್ವ ಬಾಲಕ ಗಾಯಗೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಜಿನಕನಹಳ್ಳಿ ನಡೆದಿದೆ.

ಮೃತಪಟ್ಟವರು ಸಂತೋಷ್(32), ಸೌಮ್ಯ (27), ನಿತ್ಯಸಾಕ್ಷಿ (4) ಹಾಗೂ ಗಾಯಗೊಂಡ ಬಾಲಕ ಅಭಿ (9) ಎಂದು ಗುರುತಿಸಲಾಗಿದೆ.

ಮೃತಪಟ್ಟವರೆಲ್ಲ ಕೊಳ್ಳೇಗಾಲದ ಪಾಳ್ಯ ಗ್ರಾಮದವರು ಎನ್ನಲಾಗಿದೆ. ಒಂದೇ ಕುಟುಂಬದ ನಾಲ್ವರು ಬೈಕ್‌ನಲ್ಲಿ ಬರುವಾಗ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿಯಾಗಿರಬಹುದು ಎಂದು ಅಂದಾಜಿಸಲಾಗಿದೆ. ಬೈಕ್‌ನಿಂದ ಬಿದ್ದ ರಭಸಕ್ಕೆ ಸಂತೋಷ್‌, ಸೌಮ್ಯ ದಂಪತಿ ಹಾಗೂ ಮಗಳು ನಿತ್ಯಸಾಕ್ಷಿ ಮೂವರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಗ ಅಭಿ ಗಂಭೀರ ಗಾಯಗೊಂಡಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೂವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗುತ್ತಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ನಡೆಸುತಿದ್ದಾರೆ.

- Advertisement -

Related news

error: Content is protected !!