

ತುಮಕೂರು: ಬೈಕೊಂದು ಮುಂದೆ ಸಾಗುತ್ತಿದ್ದ ಟ್ಯಾಕ್ಟರ್ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿದ್ದ ತಾಯಿ ಹಾಗೂ ಇಬ್ಬರು ಪುತ್ರರು ಸ್ಥಳದಲ್ಲೇ ಮೃತಪಟ್ಟ ಘಟನೆ ತುಮಕೂರು ತಾಲೂಕಿನ ಓಬಳಾಪುರ ಗೇಟ್ ಬಳಿ ನಡೆದಿದೆ.
ಮೃತಪಟ್ಟವರನ್ನು ಮಧುಗಿರಿ ತಾಲೂಕಿನ ಪುರವರ ಹೋಬಳಿ ಗೊಂದಿಹಳ್ಳಿ ಗ್ರಾಮದ ನಿವಾಸಿ ಮುತ್ತಾಝ್ (38), ಅವರ ಪುತ್ರರಾದ ಮುಹಮ್ಮದ್ ಆಸಿಫ್(12) ಹಾಗೂ ಶಾಕಿರ್ ಹುಸೇನ್ (22) ಎಂದು ಗುರುತಿಸಲಾಗಿದೆ.
ಈ ಮೂವರು ಇಂದು ಮುಂಜಾನೆ ಬೈಕ್ನಲ್ಲಿ ತುಮಕೂರಿನಿಂದ ತಮ್ಮ ಊರಿಗೆ ತೆರಳುತ್ತಿದ್ದರು ಎನ್ನಲಾಗಿದೆ. ಮುಂಜಾನೆ ಮಂಜು ಬೀಳುತ್ತಿದ್ದುದ್ದರಿಂದ ಮುಂದಿದ್ದ ಟ್ರ್ಯಾಕ್ಟರ್ ಸರಿಯಾಗಿ ಗೋಚರಿಸದೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಬೈಕ್ ಚಲಾಯಿಸುತ್ತಿದ್ದ ಶಾಕಿರ್ ಹುಸೇನ್ ಅವರ ಹೆಲೈಟ್ ಹಾರಿ ಟ್ರ್ಯಾಕ್ಟರ್ ಟ್ರಾಲಿಯೊಳಗೆ ಬಿದ್ದಿದೆ. ಈ ಬಗ್ಗೆ ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಎಸ್ಪಿ ಅಶೋಕ್ ವೆಂಕಟ್, ಡಿವೈಎಸ್ಪಿ ಚಂದ್ರಶೇಖರ್ ಹಾಗೂ ಗ್ರಾಮಾಂತರ ಸಿಪಿಐ ಭೇಟಿ ನೀಡಿ ಪರಿಶೀಲನೆ ನಡೆಸಿದರು.