- Advertisement -
- Advertisement -
ಅಪರಿಚಿತ ವಾಹನಕ್ಕೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಬಿದರೆಗುಡಿ ಬಳಿ ನಡೆದಿದೆ.
ಮೃತಪಟ್ಟವರನ್ನು ತಿಪಟೂರು ತಾಲೂಕಿನ ಅಯ್ಯನಬಾವಿ ಗ್ರಾಮದ ಧನುಷ್ (19), ಮುತ್ತುರಾಜ್ (19) ಎಂದು ಗುರುತಿಸಲಾಗಿದೆ.
ಸುಮಾರು 9 ಗಂಟೆಗೆ ನಡೆದ ದುರ್ಘಟನೆ ಇದಾಗಿದೆ. ತಿಪಟೂರು ಕಡೆಯಿಂದ ಮನೆಗೆ ತೆರಳುವಾಗ ಘಟನೆ ನಡೆದಿದೆ. ಸ್ಥಳಕ್ಕೆ ಹೊನ್ನವಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳು ತಿಪಟೂರು ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಘಟನೆ ಸಂಬಂಧ ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -