Saturday, June 28, 2025
spot_imgspot_img
spot_imgspot_img

ಬಂಟ್ವಾಳ: ಓವರ್ ಟೇಕ್ ಭರದಲ್ಲಿ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದು ಲಾರಿಯಡಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲಿಯೇ ಮೃತ್ಯು : ಸಹಸವಾರ ಗಂಭೀರ

- Advertisement -
- Advertisement -
This image has an empty alt attribute; its file name is VC_PUC_-1-819x1024.jpg

ಬಂಟ್ವಾಳ: ಬೈಕಿನಲ್ಲಿ ಸಂಚರಿಸುತ್ತಿದ್ದ ಸವಾರರಿಬ್ಬರು ಓವರ್ ಟೇಕ್ ಭರದಲ್ಲಿ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದು ಲಾರಿಯಡಿಗೆ ಬಿದ್ದು ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟು ಸಹಸವಾರ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಾರಿಪಳ್ಳದಲ್ಲಿ ಮೇ. 14 ರಂದು ಸಂಜೆ ವೇಳೆ ನಡೆದಿದೆ.

ಮೃತ ಬೈಕ್ ಸವಾರನನ್ನು ಉತ್ತರ ಪ್ರದೇಶ ಮೂಲದ ಸೋನು (19) ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ ಸಹಸವಾರ ಪ್ರಸಾದ್ ಪೂಜಾರಿ ಕಾರ್ಕಳ ಅವರು ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿಸಲಾಗಿದ್ದು ತುರ್ತು ಚಿಕಿತ್ಸಾಘಟಕದಲ್ಲಿ ಚಿಕಿತ್ಸೆ ನೀಡಲಗುತ್ತಿದೆ.

ಸೋನು ಅವರು ಮೂಲತಃ ಉತ್ತರಪ್ರದೇಶದವರಾದರೂ ಪ್ರಸ್ತುತ ಉಡುಪಿಯಲ್ಲಿ ವಾಸವಾಗಿದ್ದಾರೆ. ಪ್ರಸಾದ್ ಕಾರ್ಕಳ ನಿವಾಸಿಯಾಗಿದ್ದಾರೆ. ಸೋನು ಹಾಗೂ ಪ್ರಸಾದ್ ಅವರು ನೆಲ್ಯಾಡಿಯಲ್ಲಿರುವ ಹೋಟೆಲ್ ನಲ್ಲಿ ಜೊತೆಗೆ ಕೆಲಸ ಮಾಡುತ್ತಿದ್ದು, ಇಬ್ಬರು ಮಂಗಳೂರಿಗೆ ತೆರಳುತ್ತಿದ್ದರು ಎನ್ನಲಾಗಿದೆ.

ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ಮಧ್ಯೆ ಫರಂಗಿಪೇಟೆ ಸಮೀಪದ ಮಾರಿಪಳ್ಳ ಎಂಬಲ್ಲಿ ಜಂಕ್ಷನ್ ನ ಹೆದ್ದಾರಿಗಯಲ್ಲಿ ಅಡ್ಡಲಾಗಿ ಇರಿಸಲಾದ ಬ್ಯಾರಿಕೇಡ್ ನ್ನು ಗಮನಿಸದ ಬೈಕ್ ಸವಾರ ಕಂಟೇನರ್ ಲಾರಿಯೊಂದನ್ನು ಓವರ್ ಟೇಕ್ ಮಾಡುವ ರಭಸಕ್ಕೆ ಬ್ಯಾರಿಕೇಡ್ ಗೆ ಡಿಕ್ಕಿಹೊಡೆದಿದ್ದಾನೆ. ಡಿಕ್ಕಿ ರಭಸಕ್ಕೆ ಸವಾರ ಹಾಗೂ ಸಹಸವಾರ ಇಬ್ಬರು ರಸ್ತೆಗೆ ಎಸೆಯಲ್ಪಟ್ಟಿದ್ದು, ಹಿಂಬದಿಯಲ್ಲಿ ಬರುತ್ತಿದ್ದ ಅದೇ ಕಂಟೇನರ್ ಲಾರಿಯ ಚಕ್ರದಡಿಗೆ ಸಿಲುಕಿಕೊಂಡಿದ್ದಾರೆ.
ಘಟನೆಯಲ್ಲಿ ಸೋನು ಸ್ಥಳದಲ್ಲಿಯೇ ಮೃತಪಟ್ಟರೆ ಗಂಭೀರವಾಗಿ ಗಾಯಗೊಂಡಿರುವ ಪ್ರಸಾದ್ ನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೋನು ಅವರ ಮೃತದೇಹವನ್ನು ಮಂಗಳೂರು ‌ವೆನ್ಲಾಕ್ ಆಸ್ಪತ್ರೆಯ ಶವಗಾರದಲ್ಲಿಡಲಾಗಿದ್ದು, ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ.ಸುತೇಶ್ ಭೇಟಿ ‌ನೀಡಿ‌ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

- Advertisement -

Related news

error: Content is protected !!