- Advertisement -
- Advertisement -
ನಾಗರ ಹಾವು ಕಚ್ಚಿ ಬಾಲಕ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಧರ್ಮಪುರದ ಬೆನಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಬಾಲಕ ಹಿರಿಯೂರು ತಾಲೂಕಿನ ಧರ್ಮಪುರದ ಬೆನಕನಹಳ್ಳಿ ಗ್ರಾಮ ನಿವಾಸಿ ಶಶಾಂಕ್ (11) ಎಂದು ಗುರುತಿಸಲಾಗಿದೆ.
ಮನೆಯಲ್ಲಿ ಆಟವಾಡುತ್ತಿದ್ದಾಗ ಬಾಲಕನಿಗೆ ಹಾವು ಕಚ್ಚಿದೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಬಾಲಕ ಸಾವನ್ನಪ್ಪಿದ್ದಾನೆ. ಇನ್ನು, ಸಕಾಲದಲ್ಲಿ ಬಾಲಕನಿಗೆ ಸರಿಯಾದ ಚಿಕಿತ್ಸೆ ಕೊಡಲಿಲ್ಲ ಅಂತಾ ಪೋಷಕರು ಆರೋಪಿಸುತ್ತಿದ್ದಾರೆ. ಆಸ್ಪತ್ರೆ ಮುಂದೆ ಬಾಲಕನ ಶವವಿಟ್ಟು ಪೋಷಕರಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ರಾಂಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -