Monday, June 24, 2024
spot_imgspot_img
spot_imgspot_img

ಶಾಲಾ ಆವರಣದಲ್ಲಿ ವಿದ್ಯುತ್‌ ತಂತಿ ತಗುಲಿ ಬಾಲಕ ಮೃತ್ಯು

- Advertisement -G L Acharya panikkar
- Advertisement -

ವಿದ್ಯುತ್ ಶಾಕ್‌ನಿಂದ ಏಳನೇ ತರಗತಿ ಬಾಲಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ.

ಆಕಾಶ್ (13) ಮೃತ ಬಾಲಕ.

ಶಾಲಾ ಆವರಣದ ಹಣ್ಣು ಕೀಳಲು ಆಕಾಶ್ ಸೇರಿ ಮೂವರು ನೇರಳೆ ಮರ ಏರಿದ್ದರು. ಈ ವೇಳೆ ಮರದಿಂದ ಜಾರಿ ಬೀಳುವಾಗ ಬಾಲಕ ವಿದ್ಯುತ್ ತಂತಿ ಹಿಡಿದಿದ್ದಾನೆ. ಪರಿಣಾಮ ವಿದ್ಯುತ್ ಶಾಕ್ ತಗುಲಿ ಬಾಲಕ ಕೆಳಗೆ ಬಿದ್ದಿದ್ದ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೇ ಬಾಲಕ ಆಕಾಶ್ ಸಾವನ್ನಪ್ಪಿದ್ದಾನೆ. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

- Advertisement -

Related news

error: Content is protected !!