- Advertisement -
- Advertisement -
ವ್ಯಕ್ತಿಯೊಬ್ಬ ಗಣರಾಜ್ಯೋತ್ಸವ ಆಚರಣೆ ವೇಳೆ ಶೋಕಿಗಾಗಿ ಗಾಳಿಯಲ್ಲಿ ಹಾರಿಸಿದ ಗುಂಡು, ಗ್ರಾಮ ಪಂಚಾಯಿತಿ ಅಧ್ಯಕ್ಷೆಗೆ ತಗುಲಿದ ಘಟನೆ ವಿಜಯಪುರ ಇಂಡಿ ತಾಲೂಕಿನ ಹಿರೆರೂಗಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಲ್ಲು ಗಿನ್ನಿ ಎಂಬಾತ ಗುಂಡು ಹಾರಿಸಿದ ವ್ಯಕ್ತಿಯಾಗಿದ್ದಾನೆ. ಈತ ಧ್ವಜಾರೋಹಣದ ವೇಳೆ ಗ್ರಾಪಂ ಎದುರು ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿದ್ದಾನೆ. ಈ ವೇಳೆ ಒಂದು ಗುಂಡು ಗ್ರಾಪಂ ಅಧ್ಯಕ್ಷೆಯಾದ ಸೋಮವ್ವ (50) ಎಂಬವರ ತೊಡೆಗೆ ತಗುಲಿದೆ
ಗುಂಡೇಟಿನಿಂದ ಗಾಯಗೊಂಡ ಮಹಿಳೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
- Advertisement -