Saturday, May 11, 2024
spot_imgspot_img
spot_imgspot_img

ಪಾದಚಾರಿಗಳ ಮೇಲೆ ಹರಿದ ಬಸ್; ಮಹಿಳೆ ಮೃತ್ಯು..!

- Advertisement -G L Acharya panikkar
- Advertisement -

ಪಾದಚಾರಿಗಳ ಮೇಲೆ ಖಾಸಗಿ ಬಸ್ ಹರಿದು ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಮೃತಪಟ್ಟ ಮಹಿಳೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ನಾಯಕಹಳ್ಳಿ ಗ್ರಾಮದ ರಾಮಕ್ಕ (58) ಗಂಭೀರ ಗಾಯಗೊಂಡ ವ್ಯಕ್ತಿ ಶ್ರೀನಿವಾಸ(62) ಎಂದು ಗುರುತಿಸಲಾಗಿದೆ.

ಇಬ್ಬರೂ ಪಾದಚಾರಿಗಳು ವೈಯಕ್ತಿಕ ಕೆಲಸದ ನಿಮಿತ್ತ ನಗರಕ್ಕೆ ಬಂದಾಗ, ಇಲ್ಲಿನ ತಾಲೂಕು ಕಚೇರಿ ಸಮೀಪದ ಸಿಗ್ನಲ್ ಬಳಿ ಬಸ್ ಹರಿದ ಪರಿಣಾಮ ಮಹಿಳೆ ಮೃತಪಟ್ಟಿದ್ದು ಮತ್ತೋರ್ವರು ಗಂಭೀರವಾಗಿ ಗಾಯಗೊಂಡಿದ್ದು, ಎಸ್‌.ಎನ್.ಆರ್ ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಮೃತ ಮಹಿಳೆಯ ಮೃತದೇಹವನ್ನು ಎಸ್.ಎನ್.ಆರ್. ಜಿಲ್ಲಾಸ್ಪತ್ರೆಯ ಚಿತಾಗಾರದಲ್ಲಿ ಇಡಲಾಗಿದೆ. ಗಲ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.

- Advertisement -

Related news

error: Content is protected !!