Saturday, June 28, 2025
spot_imgspot_img
spot_imgspot_img

ತಿರುಪತಿಗೆ ಹೊರಟಿದ್ದ ಕಾರು ಭೀಕರ ಅಪಘಾತ; ನಾಲ್ವರು ಸಾವು, 6 ಮಂದಿ ಗಂಭೀರ ಗಾಯ..!

- Advertisement -
- Advertisement -

ಹಾವೇರಿ: ದೇವರ ದರ್ಶನಕ್ಕೆಂದು ತಿರುಪತಿಗೆ ಹೋಗುತ್ತಿದ್ದ ಕಾರು ಏಕಾಏಕಿ ನಸುಕಿನಜಾವ ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು , 6 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಹಲಗೇರಿ ಬೈಪಾಸ್ ಬಳಿ ನಡೆದಿದೆ.

ಮೃತಪಟ್ಟವರನ್ನು ಸುರೇಶ ಜಾಡಿ (54), ಐಶ್ವರ್ಯ ಬಾರ್ಕಿ (22), ಚೇತನಾ (7), ಪವಿತ್ರಾ ಸಮಗಂಡಿ (28) ಹಾಗೂ ಗಾಯಗೊಂಡವರನ್ನ ಚನ್ನವೀರಪ್ಪ ಜಾಡಿ, ಸಾವಿತ್ರಾ ಜಾಡಿ, ವಿಕಾಶ ಹೊನ್ನಪ್ಪ ಬಾರ್ಕಿ, ಹೊನ್ನಪ್ಪ ಬಾರ್ಕಿ, ಪ್ರಭುರಾಜ ಸಮಗಂಡಿ, ಗೀತಾ ಬಾರ್ಕಿ ಎಂದು ಗುರುತಿಸಲಾಗಿದೆ.

ದೇವರ ದರ್ಶನಕ್ಕೆಂದು ತಿರುಪತಿಗೆ ತೆರಳುತ್ತಿದ್ದ ನಗರದ ಸಮಗಂಡಿ ಮತ್ತು ಬಾರ್ಕಿ ಎಂಬ ಎರಡು ಕುಟುಂಬಗಳು ಹೋಗುತ್ತಿದ್ದ ವೇಳೆ ರಾಣೆಬೆನ್ನೂರಿನ ರಾಷ್ಟ್ರೀಯ ಹೆದ್ದಾರಿ-4ರ (NH-4) ಹಲಗೇರಿ ಬ್ರಿಡ್ಜ್‌ಬಳಿ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ್ದೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಗಾಯಾಳುಗಳನ್ನ ಸದ್ಯ ದಾವಣಗೆರೆ ಮತ್ತು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

- Advertisement -

Related news

error: Content is protected !!