- Advertisement -
- Advertisement -
ಕಾರು ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಕೊಡಗು ಕೊಯನಾಡಿನಲ್ಲಿ ನಡೆದಿದೆ.
ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯ ಗಡಿ ಗ್ರಾಮವಾಗಿರುವ ಕೊಯನಾಡು ಬಳಿ ಮಡಿಕೇರಿಯಿಂದ ಬರುತ್ತಿದ್ದ ಬಸ್ಗೆ ಸುಳ್ಯದಿಂದ ತೆರಳುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಲಾರಿಯೊಂದನ್ನು ಓವರಟೇಕ್ ಮಾಡುವ ಸಮಯದಲ್ಲಿ ಈ ಅಪಘಾತ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಕಾರು ರಸ್ತೆಯಿಂದ ಹೊರ ರಟ್ಟಿ ಬದಿಯ ಹಳ್ಳಕ್ಕೆ ಬಿದ್ದಿದೆ.
ಕಾರಿಗೆ ತೀವ್ರ ಹಾನಿಯಾಗಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಸಂಪಾಜೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದ ಕೆಲ ಕಾಲ ರಸ್ತೆಯಲ್ಲಿ ವಾಹನ ಸಾಲುಗಟ್ಟಿ ನಿಂತ ಕಾರಣ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಸಾರ್ವಜನಿಕರ ಸಹಕಾರದೊಂದಿಗೆ ರಸ್ತೆ ಸಂಚಾರ ಸುಗಮಗೊಳಿಸಿದ್ದಾರೆ.
- Advertisement -