Thursday, May 16, 2024
spot_imgspot_img
spot_imgspot_img

ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಓರ್ವ ಸಾವು, ಮಹಿಳೆ ಗಂಭೀರ..!

- Advertisement -G L Acharya panikkar
- Advertisement -

ನಿಂತಿದ್ದ ಲಾರಿಗೆ ಓಮಿನಿ ಕಾರು ಡಿಕ್ಕಿ ಹೊಡೆದು ಓರ್ವ ಸಾವನ್ನಪ್ಪಿದ್ದು ಮಹಿಳೆ ಗಂಭೀರ ಗಾಯಗೊಂಡ ಘಟನೆ ಹಾಸನದ ಅರಕಲಗೂಡು ಪಟ್ಟಣದ ಸಾರಿಗೆ ಬಸ್ ಡಿಪೋ ಹಿಂಭಾಗ ನಡೆದಿದೆ.

ಮೃತಪಟ್ಟ ವ್ಯಕ್ತಿ ಹೂವಿನ ವ್ಯಾಪಾರಿ ಮಂಜೇಗೌಡ (38) ಹಾಗೂ ಗಂಭೀರ ಗಾಯಗೊಂಡ ಮಹಿಳೆ ಮಂಜೇಗೌಡ ಪತ್ನಿ ಅನಸೂಯ ಎಂದು ಗುರುತಿಸಲಾಗಿದೆ.

ನಿಂತಿದ್ದ ಲಾರಿಗೆ ಓಮಿನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಚಲಾಯಿಸುತ್ತಿದ್ದ ಹೂವಿನ ವ್ಯಾಪಾರಿ ಮಂಜೇಗೌಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಮಂಜೇಗೌಡ ಪತ್ನಿ ಅನಸೂಯಗೆ ಗಂಭೀರ ಗಾಯವಾಗಿದೆ. ಮಂಜೇಗೌಡ ಅರಕಲಗೂಡು ಪಟ್ಟಣದ ವಿನಾಯಕ ನಗರ ನಿವಾಸಿಯಾಗಿದ್ದು, ಅಪಘಾತದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗಾಯಾಳುವಿಗೆ ಅರಕಲಗೂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

- Advertisement -

Related news

error: Content is protected !!