- Advertisement -
- Advertisement -
ಬಸ್ ಸ್ಟಾಪ್ ನಲ್ಲಿ ನಿಂತಿದ್ದ ಬಿಎಂಟಿಸಿ ಬಸ್ಗೆ ವೇಗವಾಗಿ ಬಂದು ಡಿಕ್ಕಿ ಹೊಡೆದ ಕಾರು ಅಗ್ನಿಗಾಹುತಿಯಾದ ಘಟನೆ ಬೆಂಗಳೂರಿನ ನಾಗರಭಾವಿ ಹೊರವರ್ತುಲ ರಸ್ತೆಯ ಚಂದ್ರಾಲೇಔಟ್ ಬಸ್ ನಿಲ್ದಾಣದ ಬಳಿ ನಡೆದಿದೆ.
ಯಶವಂತಪುರದಿಂದ ನಾಯಂಡಹಳ್ಳಿಗೆ ತೆರಳುತ್ತಿದ್ದ ಬಸ್ ಬೆಳಗ್ಗೆ 9 ಗಂಟೆ ವೇಳೆಗೆ ಪ್ರಯಾಣಿಕರನ್ನು ಇಳಿಸಲು ಹಾಗೂ ಹತ್ತಿಸಿಕೊಳ್ಳಲು ಚಂದ್ರಾಲೇಔಟ್ ಬಸ್ ನಿಲ್ದಾಣದಲ್ಲಿ ನಿಂತಿತ್ತು. ಈ ಸಂದರ್ಭದಲ್ಲಿ ವೇಗವಾಗಿ ಬಂದ ಕಾರು ಹಿಂಬದಿಯಿಂದ ಬಸ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಉಂಟಾದ ಘರ್ಷಣೆಯಿಂದ ಬೆಂಕಿ ಹತ್ತಿಕೊಂಡಿದ್ದು, ಕಾರು ಪೂರ್ತಿಯಾಗಿ ಅಗ್ನಿಗಾಹುತಿಯಾಗಿದೆ. ಬಸ್ಸಿನ ಹಿಂಬದಿ ಆಸನಗಳು ಸುಟ್ಟು ಕರಕಲಾಗಿವೆ. ಕಾರು ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
- Advertisement -