Wednesday, May 1, 2024
spot_imgspot_img
spot_imgspot_img

ಹೆದ್ದಾರಿ ದಾಟುತ್ತಿದ್ದ ವೃದ್ಧ ಪಾದಾಚಾರಿಗೆ ಕಾರು ಡಿಕ್ಕಿ: ಸ್ಥಳದಲ್ಲಿಯೇ ಮೃತ್ಯು..!

- Advertisement -G L Acharya panikkar
- Advertisement -

ಕುಂದಾಪುರ: ಹೆದ್ದಾರಿ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವೃದ್ಧ ಪಾದಾಚಾರಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಾವುಂದದ ಮಸ್ಕಿ ನಡೆದಿದೆ.
ಮೃತ ದುರ್ದೈವಿ ಗೋವಿಂದ ಖಾರ್ವಿ(70)  ಎಂದು ಗುರುತಿಸಲಾಗಿದೆ.

ಕಾರು ಕುಂದಾಪುರ ಕಡೆಯಿಯಿಂದ ಬೈಂದೂರು ಕಡೆಗೆ ಚಲಿಸುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ದಾಟುತ್ತಿದ್ದ ವೃದ್ದನಿಗೆ ಡಿಕ್ಕಿ ಹೊಡೆದಿದೆ. ತಕ್ಷಣ ಗಂಗೊಳ್ಳಿಯ ಆಪದ್ಭಾಂಧವ ಇಬ್ರಾಹಿಂ ಗಂಗೊಳ್ಳಿ ಅಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಗಂಭೀರ ಗಾಯಗೊಂಡ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!