- Advertisement -
- Advertisement -
ಏಳು ಜನ ಹೈದರಾಬಾದ್ ಗೆ ಪ್ರಯಾಣ ಮಾಡುವ ವೇಳೆ ರಸ್ತೆ ಅಪಘಾತವಾಗಿದ್ದು, ಐದು ಜನ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಬಳ್ಳಾರಿ ನಗರದ ಬಸವನ ಕುಂಟೆಯಲ್ಲಿ ನಡೆದಿದೆ.
ಮೃತಪಟ್ಟವರನ್ನು ವಾಸಿಂ, ಬುಸ್ರಾ , ಮರಿಯಾ, ಫಾತಿಮಾ (50) ಅಬ್ದುಲ್ ರಹಮಾನ್ (30) ಎಂದು ಗುರುತಿಸಲಾಗಿದೆ.
ಮೂಲತಃ ದೇವಿನಗರದ ಬಸವನ ಕುಂಟೆ ನಿವಾಸಿಗಳಾದ ಅಬ್ದುಲ್ ರೆಹಮಾನ್ ಅವರ ಕುಟುಂಬ ಸದಸ್ಯರು ಬಳ್ಳಾರಿಯಿಂದ ಹೈದರಾಬಾದ್ ಕಡೆಗೆ ಹೋಗುತ್ತಿದ್ದಾಗ ಮೆಹಬೂಬ್ ನಗರ್ ಜಿಲ್ಲೆಯ ಕೊತಕೋಟ ಬೈಪಾಸ್ನ ತೆಕ್ಕಲಯ್ಯ ದರ್ಗಾ ಬಳಿ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಭೀಕರ ರಸ್ತೆ ಅಪಘಾತವಾಗಿದೆ. ರೆಹಮಾನ್ ಅವರ ಹರಿಟಿಗಾ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತೊಂದು ಮಗು ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದೆ. ತೀವ್ರ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
- Advertisement -