- Advertisement -
- Advertisement -




ಅತಿ ವೇಗವಾಗಿ ಚಲಾಯಿಸಿಕೊಂಡು ಬಂದ ಕಾರು ರಸ್ತೆ ಬದಿ ಉರುಳಿ ಬಿದ್ದ ಪರಿಣಾಮ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ಮಾಡಿಕೆರೆ ಕ್ರಾಸ್ ಬಳಿ ನಡೆದಿದೆ.
ಮೃತಪಟ್ಟ ಯುವಕ ಶ್ರೀನಿವಾಸಪುರ ಮೂಲದ ನಿವಾಸಿ ಚಿರಾಗ್ (26) ಎಂದು ಗುರುತಿಸಲಾಗಿದೆ.
ಕಾರಿನಲ್ಲಿದ್ದ ಮತ್ತೊಬ್ಬ ಯುವಕ ಪ್ರವೀಣ್ಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಗಾಯಗೊಂಡ ಯುವಕನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -