![G L Acharya G L Acharya](https://vtvvitla.com/wp-content/uploads/2023/07/gl_acharya.jpeg)
![panikkar panikkar](https://vtvvitla.com/wp-content/uploads/2020/07/panikkar.jpeg)
![](https://vtvvitla.com/wp-content/uploads/2024/06/WhatsApp-Image-2024-06-27-at-12.38.09-PM-682x1024.jpeg)
![](https://vtvvitla.com/wp-content/uploads/2021/10/indane-gas-1024x606.jpg)
![](https://vtvvitla.com/wp-content/uploads/2024/04/vigneshwara-new-683x1024.jpeg)
ಕಾಸರಗೋಡು: ಕಾಸರಗೋಡಿನಿಂದ ಕುಟ್ಟಿಕೋಳ್ ಪಳ್ಳಂಜಿ ಪಾಂಡಿ ಅರಣ್ಯ ಪ್ರದೇಶದ ಮುಳುಗು ಸೇತುವೆ ಭಾರೀ ಮಳೆಯಿಂದಾಗಿ ಮುಳುಗಡೆಯಾಗಿದ್ದು ಸೇತುವೆ ಮೇಲೆ ಸಂಚರಿಸುತ್ತಿದ್ದ ಕಾರೊಂದು ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ. ಕಾರಿನಲ್ಲಿದ್ದ ಇಬ್ಬರು ಪವಾಡ ಸದೃಶ್ಯವಾಗಿ ಅಪಾಯದಿಂದ ಪಾರಾಗಿದ್ದು ಕಾರು ನೀರಿನಲ್ಲಿ ಕೊಚ್ಚಿ ಹೋಗಿದೆ.
ಗುರುವಾರ ಬೆಳಿಗ್ಗೆ ಅರಣ್ಯ ಪ್ರದೇಶದ ಪಳ್ಳಂಜಿ- ಪಾಂಡಿ ರಸ್ತೆಯ ತಡೆಗೋಡೆ ಇಲ್ಲದ ಸೇತುವೆ ಮೂಲಕ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಕಾರಿನಲ್ಲಿದ್ದ ಅಂಬಲತ್ತರ ದ ತಸ್ರಿಫ್ ( 36) ಅಬ್ದುಲ್ ರಶೀದ್ ( 38) ರನ್ನು ಪರಿಸರ ವಾಸಿಗಳು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಮೇಲಕ್ಕೆತ್ತಿ ರಕ್ಷಿಸಿದ್ದಾರೆ.
ಇಬ್ಬರೂ ಉಪ್ಪಿನಂಗಡಿಗೆ ತೆರಳುತ್ತಿದ್ದರು. ಗೂಗಲ್ ಮ್ಯಾಪ್ ಮೂಲಕ ಇವರು ಕಾರನಲ್ಲಿ ಸಂಚರಿಸುತ್ತಿದ್ದರು. ಹೊಳೆಯಲ್ಲಿ ಸೇತುವೆ ಮೇಲಿಂದ ನೀರು ಹರಿದು ಹೋಗುತ್ತಿತ್ತು. ಸೇತುವೆಗೆ ತಡೆಗೋಡೆ ಇಲ್ಲದಿರುವುದನ್ನು ಅರಿಯದೆ ಇವರು ಮುಂದಕ್ಕೆ ಸಾಗುತ್ತಿದ್ದಾಗ ನೀಯಂತ್ರಣ ತಪ್ಪಿದ ಕಾರು ಹೊಳೆಗೆ ಬಿದ್ದು ಕೊಚ್ಚಿಕೊಂಡು ಹೋಗಿದ್ದು , ಅಲ್ಪ ದೂರಕ್ಕೆ ಸಾಗಿ ಬದಿಯ ಮರಕ್ಕೆ ಬಡಿದು ನಿಂತಿದೆ.
ಇಬ್ಬರೂ ಕಾರಿನಿಂದ ಹೊರಬಂದು ಮರ ಹಿಡಿದು ನಿಂತಿದ್ದರು. ಪರಿಸರವಾಸಿಗಳು ಗಮನಿಸಿ ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು , ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬಂದಿಗಳು ಹಾಗೂ ಪರಿಸರವಾಸಿಗಳು ಇಬ್ಬರನ್ನು ರಕ್ಷಿಸಿದರು.