ಪುತ್ತೂರು: ಈದ್ ಮಿಲಾದ್ ಹಬ್ಬದ ಮೆರವಣಿಗೆ ವೇಳೆ ಕಲ್ಲು ತೂರಾಟದಿಂದ ಹಾನಿಯಾಗಿರುವ ಮನೆಗಳಿಗೆ ಭೇಟಿ ನೀಡಿದ್ದ ಅರುಣ್ ಕುಮಾರ್ ಪುತ್ತಿಲ ಅವರು ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಆರೋಪದಲ್ಲಿ ಸ್ಥಳೀಯ ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶಿವಮೊಗ್ಗದ ರಾಗಿಗುಡ್ಡದಲ್ಲಿ ಕಲ್ಲು ತೂರಾಟದಿಂದ ಮನೆಗಳಿಗೆ ಹಾನಿಯಾಗಿದ್ದು, ಸಂತ್ರಸ್ತರ ಮನೆ ಭೇಟಿ ಸಂದರ್ಭ ಅರುಣ್ ಕುಮಾರ್ ಪುತ್ತಿಲ ಅವರು ಪ್ರಚೋದನಾಕಾರಿ ಹೇಳಿಕೆ ನೀಡಿದ್ದರು ಎಂದು ಆರೋಪಿಸಲಾಗಿದೆ.
ನಮ್ಮಲ್ಲೂ ತಲ್ವಾರ್, ಶಸ್ತ್ರಾಸ್ತ್ರ ಇದೆ. ಅಗತ್ಯ ಬಿದ್ದರೆ ಇದೇ ಶಸ್ತ್ರಾಸ್ತ್ರ ಮೂಲಕ ಪ್ರತಿಕ್ರಿಯೆ ಕೊಡಲು ಹಿಂದೂ ಸಮಾಜ ಸಿದ್ಧವಿದೆ. ನವರಾತ್ರಿ ದಿನ ಶಸ್ತ್ರಾಸ್ತ್ರಗಳಿಗೆ ಪೂಜೆ ಮಾಡುತ್ತೇವೆ. ಪ್ರತಿ ಮನೆಯಲ್ಲೂ ತಲ್ವಾರ್ಗಳಿಗೆ ಪೂಜೆ ಮಾಡಬೇಕು. ಸ್ಕ್ರ್ಯೂ ಡ್ರೈವರ್, ಸ್ಪ್ಯಾನರ್ ಕೈಬಿಡಿ ತಲ್ವಾರ್ಳಿಗೆ ಪೂಜೆ ಮಾಡಿ ಎಂದಿದ್ದರು.
144 ಅಡಿ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಕೋಮುಗಳ ನಡುವೆ ದ್ವೇಷದ ಭಾವನೆ ಮೂಡುವಂತಹ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 153 ಎ ಅಡಿಯಲ್ಲಿ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.