- Advertisement -
- Advertisement -
ಶಿವಮೊಗ್ಗ ನಗರದ ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ನಿನ್ನೆ(ಮೇ,08) ಹಾಡುಹಗಲೇ ಇಬ್ಬರು ರೌಡಿಗಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಡಬಲ್ ಮರ್ಡರ್ ಘಟನೆಯಿಂದ ಶಿವಮೊಗ್ಗ ನಗರವು ಬೆಚ್ಚಿಬಿದ್ದಿದೆ. ಹಳೇ ವೈಷ್ಯಮ್ಯ ಹಿನ್ನಲೆಯಲ್ಲಿ ಈ ದುರ್ಘಟನೆ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗಾಯಗೊಂಡಿದ್ದ ಮತ್ತೋರ್ವ ರೌಡಿ, ಚಿಕಿತ್ಸೆ ಫಲಿಸಿದೇ ಕೊನೆಯುಸಿರೆಳೆದಿದ್ದಾನೆ.
ಘಟನೆಯಲ್ಲಿ ಗೌಸ್ ಮತ್ತು ಶೋಯೆಬ್ ಎಂಬ ಇಬ್ಬರು ರೌಡಿಗಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲಾಟೆಯಲ್ಲಿ ಗಾಯಗೊಂಡಿದ್ದ ರೌಡಿ ಯಾಸೀನ್ ಖುರೇಷಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇಂದು(ಮೇ.09) ಚಿಕಿತ್ಸೆ ಫಲಕಾರಿ ಆಗದೇ ಸಾವನ್ನಪ್ಪಿದ್ದಾನೆ. ಇನ್ನು ಘಟನೆಗೆ ಸಂಬಂಧಿಸಿದಂತೆ ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ನೇತೃತ್ವದಲ್ಲಿ ಎರಡು ಗ್ಯಾಂಗ್ನಿಂದ 15 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
- Advertisement -