Monday, May 6, 2024
spot_imgspot_img
spot_imgspot_img

ಬೆಳ್ತಂಗಡಿ: ಲಾಯಿಲ ಗಾಂಧಿನಗರ ಎಂಬಲ್ಲಿ ನಡೆದ ಕೊಲೆ ಪ್ರಕರಣ; ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ರೂ.3 ಲಕ್ಷ ದಂಡ

- Advertisement -G L Acharya panikkar
- Advertisement -

ಬೆಳ್ತಂಗಡಿ: ಲಾಯಿಲ ಗ್ರಾಮದ ಗಾಂಧಿನಗರ ಎಂಬಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗಳಾದ ಯೋಗೀಶ್ ಮತ್ತು ಆತನ ಮಗ ಜೀವನ್ ಎಂಬವರಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು ರೂ 3,00,000/- ದಂಡ, ದಂಡ ಕಟ್ಟಲು ತಪ್ಪಿದರೆ ಹೆಚ್ಚುವರಿ 6 ತಿಂಗಳ ಸಾದಾ ಶಿಕ್ಷೆ ವಿಧಿಸಿ ನ್ಯಾಯಾಲಯವು ಆದೇಶಿಸಿದೆ.

2020 ಫೆ.09 ರಂದು ಬೆಳ್ತಂಗಡಿ ತಾಲೂಕು ಲಾಯಿಲ ಗ್ರಾಮದ ಗಾಂಧಿನಗರ ಎಂಬಲ್ಲಿ ನಡೆದ ಕೊಲೆ ನಡೆದಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಆರೋಪಿಗಳಾದ ಲಾಯಿಲ ಗ್ರಾಮದ ನಿವಾಸಿ ಯೋಗೀಶ್ (51) ಮತ್ತು ಆತನ ಮಗ ಜೀವನ್ ಎಂಬವರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಕೆಯಾಗಿತ್ತು. ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಡಿ.06 ರಂದು ಅಪರಾಧಿ ಯೋಗೀಶನಿಗೆ ಕಲಂ: 302 ಐಪಿಸಿ ಅಡಿಯಲ್ಲಿ ಜೀವಾವಧಿ ಶಿಕ್ಷೆ ಮತ್ತು ರೂ. 3 ಲಕ್ಷ ದಂಡ ವಿಧಿಸಿ ಆದೇಶ ಮಾಡಿದ್ದು, ದಂಡ ಕಟ್ಟಲು ತಪ್ಪಿದರೆ ಹೆಚ್ಚುವರಿ 6 ತಿಂಗಳ ಸಾದಾ ಶಿಕ್ಷೆ ವಿಧಿಸಲಾಗಿರುತ್ತದೆ.

ಪ್ರಕರಣದ ತನಿಖಾಧಿಕಾರಿಯಾಗಿ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಾಗಿದ್ದ ಸಂದೇಶ್ ಪಿ.ಜಿ ರವರು ಹಾಗೂ ತನಿಖಾ ಸಹಾಯಕರಾಗಿ ಎ ಎಸ್ ಐ ವೆಂಕಟೇಶ್ ರವರು ಕಾರ್ಯನಿರ್ವಹಿಸಿರುತ್ತಾರೆ. ನ್ಯಾಯಾಲಯ ಕರ್ತವ್ಯದಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಜಗದೀಶ್ ರವರು ಸಹಕರಿಸಿರುತ್ತಾರೆ. ಸರಕಾರದ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟ‌ರ್ ಶ್ರೀಮತಿ ಜ್ಯೋತಿ ಪ್ರಮೋದ ನಾಯಕ್ ರವರು ನ್ಯಾಯಾಲಯದಲ್ಲಿ ವಾದಿಸಿರುತ್ತಾರೆ.

- Advertisement -

Related news

error: Content is protected !!