Monday, June 30, 2025
spot_imgspot_img
spot_imgspot_img

ನೆಲ್ಯಾಡಿ: ಜಾಗದ ವಿವಾದಕ್ಕೆ ಸಂಬಂಧಿಸಿ ಕತ್ತಿಯಿಂದ ಕಡಿದು ವ್ಯಕ್ತಿಯ ಕೊಲೆ ಪ್ರಕರಣ – ಪ್ರಮುಖ ಆರೋಪಿ ಪೊಲೀಸ್‌ ವಶಕ್ಕೆ

- Advertisement -
- Advertisement -

ನೆಲ್ಯಾಡಿ: ಜಾಗದ ವಿವಾದಕ್ಕೆ ಸಂಬಂಧಿಸಿ ಪ್ರಗತಿಪರ ಕೃಷಿಕರೋರ್ವರನ್ನು ಅವರ ಸಂಬಂಧಿಕನೇ ರಾತ್ರಿ ಹೊತ್ತು ಕಾದು ಕುಳಿತು ಅಟ್ಟಾಡಿಸಿ ಕತ್ತಿಯಿಂದ ಕೊಲೆ ನಡೆಸಿದ ಘಟನೆ ನ.8ರಂದು ಗೋಳಿತೊಟ್ಟು ಸಮೀಪದ ಆಲಂತಾಯ ಗ್ರಾಮದ ಪೆರ್ಲ ಎಂಬಲ್ಲಿ ನಡೆದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹರೀಶ್ ಎಂಬಾತನನ್ನು ಶುಕ್ರವಾರದಂದು ತಡರಾತ್ರಿ ಗೋಳಿತ್ತೋಟ್ಟು ಸಮೀಪದ ಸಣ್ಣಂಪಾಡಿ ಎಂಬಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಕಡಬ ತಾಲೂಕಿನ ಆಲಂತಾಯ ಗ್ರಾಮದ ಪೆರ್ಲ ನಿವಾಸಿ ವೆಂಕಪ್ಪ ಗೌಡ ಮತ್ತು ದೇಜಮ್ಮ ದಂಪತಿಯ ಪುತ್ರ ರಮೇಶ ಗೌಡ(49) ಕೊಲೆಯಾದ ವ್ಯಕ್ತಿ. ಇವರ ಸಂಬಂಧಿಕನೇ ಆಗಿರುವ ಪೆರ್ಲದ ಕಲ್ಲಂಡದ ಹರೀಶ, ಸಂತೋಷ್, ಧರ್ಣಪ್ಪ ಯಾನೆ ಬೆಳ್ಳಿಯಪ್ಪ ಸೇರಿ ಕೃತ್ಯ ಎಸಗಿ ಆರೋಪಿಗಳು ಪರಾರಿಯಾಗಿದ್ದರು.

- Advertisement -

Related news

error: Content is protected !!