Sunday, June 29, 2025
spot_imgspot_img
spot_imgspot_img

ವಿಟ್ಲ : ವ್ಯಕ್ತಿಗೆ ಅವ್ಯಾಚವಾಗಿ ಬೈದು, ಹಲ್ಲೆ ನಡೆಸಿ ಜೀವ ಬೆದರಿಕೆ : ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು

- Advertisement -
- Advertisement -

ವಿಟ್ಲ : ವ್ಯಕ್ತಿಯೋರ್ವರಿಗೆ ಅವ್ಯಾಚವಾಗಿ ಬೈದು, ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಘಟನೆ ನೆಟ್ಲ ಮುಡ್ನೂರು ಗ್ರಾಮದ ಜನತಾಗೃಹ ಎಂಬಲ್ಲಿ ನಡೆದಿದೆ.

ನೆಟ್ಲಮುಡ್ನೂರು ಗ್ರಾಮ ಬಂಟ್ವಾಳ ನಿವಾಸಿ ನವೀನ ಶೆಟ್ಟಿ (61) ಎಂಬವರು, ದಿನಾಂಕ 1-04-2024 ರಂದು ರಾತ್ರಿ, ಬಂಟ್ವಾಳ ತಾಲೂಕು ನೆಟ್ಲ ಮುಡ್ನೂರು ಗ್ರಾಮದ ಜನತಾಗೃಹ ಸಾರ್ವಜನಿಕ ರಸ್ತೆಯಲ್ಲಿ ನವೀನ ಶೆಟ್ಟಿಯವರು, ಕೊರಗಪ್ಪ ಮತ್ತು ಸುಂದರ ಎಂಬವರೊಂದಿಗೆ ಮಾತನಾಡುತ್ತಿರುವಾಗ ಆರೋಪಿ ವಸಂತ ಎಂಬಾತನು ಬಂದು ನವೀನ ಶೆಟ್ಟಿಯವರಿಗೆ ಅವ್ಯಾಚವಾಗಿ ಬೈದು, ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾನೆ.

ಈ ಬಗ್ಗೆ ನವೀನ ಶೆಟ್ಟಿಯವರು ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ 57/2024, ಕಲಂ: 504,324,506 IPC ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

- Advertisement -

Related news

error: Content is protected !!