Wednesday, May 1, 2024
spot_imgspot_img
spot_imgspot_img

ಮದುವೆಯಾಗಲು ಪ್ರಿಯಕರನಿಗೆ ಅಡ್ಡ ಬಂದ ಜಾತಿ; ಮನನೊಂದು ಯುವತಿ ಆತ್ಮಹತ್ಯೆ

- Advertisement -G L Acharya panikkar
- Advertisement -

ಮದುವೆಯ ವಿಚಾರಕ್ಕೆ ಜಾತಿ ಅಡ್ಡಬಂದಿದ್ದರಿಂದ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯೊಬ್ಬಳು ಇದೀಗ ಆಸ್ಪತ್ರೆಯಲ್ಲಿಯೇ ಮೃತಪಟ್ಟ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಮೃತಳನ್ನು ಅಮೃತಾ ಎಂದು ಗುರುತಿಸಲಾಗಿದೆ. ಈಕೆ ನಾಲ್ಕು ದಿನಗಳ ಕಾಲ ಆಸ್ಪತ್ರೆಯಲ್ಲಿ ಸಾವು-ಬದುಕಿನ ಮಧ್ಯೆ ಹೋರಾಟ ಮಾಡಿದ್ದು, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ.

ಮೃತ ಅಮೃತಾ ಪಿಯುಸಿ ಮುಗಿದ ಬಳಿಕ ಸ್ನೇಹಿತೆಯ ಗಂಡನ ಸಹೋದರ ಸುನೀಲ್ ಪರಿಚಯವಾಗಿತ್ತು. ಪರಿಚಯವು ಪ್ರೀತಿಗೆ ತಿರುಗಿದೆ. ಪ್ರೇಮ ಪ್ರಣಯ ಹೀಗೆ ಎಲ್ಲಾ ರೀತಿಯಲ್ಲಿ ಬಳಸಿಕೊಂಡ ಬಳಿಕ ಮದುವೆಯಾಗಲು ನಿನ್ನ ಜಾತಿ ಬೇರೆ ಎಂದು ಸುನೀಲ್ ನಿರಾಕರಿಸಿದ್ದ. ಮದುವೆ ನಿರಾಕರಿಸಿದ ಹಿನ್ನೆಲೆಯಲ್ಲಿ ಅಮೃತಾ ನೇಣಿಗೆ ಶರಣಾಗಿದ್ದಳು. ಕೊನೆಯ ಕ್ಷಣದಲ್ಲಿ ನೇಣಿನಿಂದ ಇಳಿಸಿ ಬದುಕಿಸಲು ಸಾಕಷ್ಟು ಪ್ರಯತ್ನ ಮಾಡಲಾಯಿತು. ಅಂತೆಯೇ ಕೂಡಲೇ ಆಕೆಯನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. 4 ದಿನಗಳ ಕಾಲ ಸಾವು-ಬದುಕಿನ ಮಧ್ಯೆ ಹೋರಾಟ ಮಾಡ್ತಿದ್ದ ಅಮೃತಾ ಇದೀಗ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾಳೆ.

ಅಮೃತ ತಳ ಸಮುದಾಯಕ್ಕೆ ಸೇರಿದ ಯುವತಿಯೆಂದು ಸುನೀಲ್ ಮೇಲ್ಜಾತಿಗೆ ಸೇರಿದ್ದವರೆಂದು ಮದುವೆ ಬೇಡ ಎಂದಿರುವ ಆರೋಪ ಕೇಳಿಬಂದಿದೆ. ಸ್ನೇಹ, ಪ್ರೀತಿ, ಹಾಸಿಗೆ ಹಂಚಿಕೊಳ್ಳುವಾಗ ಇರದ ಜಾತಿ ಮದುವೆಯಾಗುವಾಗ ಏಕೆ ಬಂತು ಎಂಬುದು ಯುವತಿಯ ಪ್ರಶ್ನೆಯಾಗಿತ್ತು. ಆತ್ಮಹತ್ಯೆಗೂ ಮುನ್ನ ತನಗೆ ಕೈ ಕೊಟ್ಟ ಪ್ರೇಮಿಯ ಮೋಸದ ಕತೆಯನ್ನು ಅಮೃತಾ ಪತ್ರದ ಮೂಲಕ ಬರೆದಿಟ್ಟಿದ್ದಳು. ಮದುವೆ ನಿರಾಕರಿಸಿದ ಯುವಕ ಸುನಿಲ್ ಮಾಡಿದ ಅತ್ಯಾಚಾರ ಮತ್ತು ಅವರ ಕುಟುಂಬದವರು ಮಾಡಿದ ನಿಂದನೆ ಬಗ್ಗೆಯೂ ಅಮೃತಾ ಪತ್ರದಲ್ಲಿ ತಿಳಿಸಿದ್ದಾಳೆ. ಪ್ರಕರಣ ಸಂಬಂಧ ಆರೋಪಿ ಸುನೀಲ್‌ನನ್ನು ಬಳ್ಳಾರಿ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.

- Advertisement -

Related news

error: Content is protected !!