Friday, May 17, 2024
spot_imgspot_img
spot_imgspot_img

ಹುಲಿ ಉಗುರು ಪ್ರಕರಣ; ನಟ ದರ್ಶನ್​ ಹಾಗೂ ವಿನಯ್ ಗುರೂಜಿ ವಿರುದ್ಧ ದೂರು ದಾಖಲು

- Advertisement -G L Acharya panikkar
- Advertisement -
vtv vitla

ಬೆಂಗಳೂರು: ಕೊರಳಿಗೆ ಹುಲಿ ಉಗುರಿನ ಡಾಲರ್ ಹಾಕಿಕೊಂಡಿದ್ದ ಕಾರಣಕ್ಕೆ ಬಿಗ್‌ ಬಾಸ್ ಸೀಸನ್ 10 ಸ್ಪರ್ಧಿ ವರ್ತೂರು ಸಂತೋಷ್‌‌ ಅರೆಸ್ಟ್ ಆದ ಬೆನ್ನಲ್ಲೇ ನಟ ದರ್ಶನ್ ಹಾಗೂ ವಿನಯ್ ಗುರೂಜಿ ವಿರುದ್ಧ ಸರ್ವ ಸಂಘಟನೆಗಳ ಒಕ್ಕೂಟದ ಶಿವಕುಮಾರ್ ಎಂಬವರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ.

ನಟ ದರ್ಶನ್ ಚಿನ್ನದ ಚೈನಿಗೆ ಹುಲಿಯ ಉಗುರು ಹಾಕಿದ್ದಾರೆ. ವಿನಯ್ ಗುರೂಜಿ ಹುಲಿಯ ಚರ್ಮದ ಮೇಲೆ ಕೂತಿದ್ದಾರೆ ಎಂದು ಶಿವಕುಮಾರ್ ತಮ್ಮ ದೂರಿನಲ್ಲಿ ಆರೋಪಿಸಿದ್ದು, ಅರಣ್ಯ ಭವನದ ಅಧಿಕಾರಿಗಳಿಗೆ ದೂರು ಸಲ್ಲಿಕೆ ಮಾಡಿದ್ದಾರೆ. ಇಂದು ರಜೆ ಇರುವ ಹಿನ್ನೆಲೆ ಪೊಲೀಸರೊಂದಿಗೆ ಮಾತುಕತೆ ನಡೆಸಿದ ಶಿವಕುಮಾರ್ ಆ ಬಳಿಕ ಮಲ್ಲೇಶ್ವರಂ ಅರಣ್ಯ ಭವನದಲ್ಲಿ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ದೂರು ಸ್ವೀಕರಿಸುವ ಅಧಿಕಾರಿಗಳು ನಾಳೆ ಕರ್ತವ್ಯದ ಅವಧಿಯಲ್ಲಿ ಅಧಿಕಾರಿಗಳನ್ನು ಭೇಟಿಯಾಗಲು ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಜನಪರ ವೇದಿಕೆ ಎಂಬ ಹೆಸರಿನಲ್ಲಿ ಶಿವಕುಮಾರ್‌ ಎಂಬವರು ಚಿತ್ರನಟ ದರ್ಶನ್ ಹಾಗು ವಿನಯ್ ಗುರೂಜಿ‌ ವಿರುದ್ದ ದೂರು ದಾಖಲಿಸಲು ಮುಂದಾಗಿದ್ದಾರೆ. ದರ್ಶನ್ ಹುಲಿ ಉಗುರು ಧರಿಸಿರುವ ಹಾಗೂ ವಿನಯ್ ಗುರೂಜಿ ಹುಲಿ ಚರ್ಮದ ಮೇಲೆ ಕುಳಿತಿರುವ ಪೋಟೊ ವೈರಲ್ ಆಗುತ್ತಿರುವ ಹಿನ್ನೆಲೆಯಲ್ಲಿ ದೂರು ನೀಡಲು ನಿರ್ಧರಿಸಲಾಗಿದೆ. ಅರಣ್ಯಧಿಕಾರಿಯನ್ನು ಭೇಟಿ ಮಾಡಿ ದೂರು ಸಲ್ಲಿಸಿರುವ ಶಿವಕುಮಾರ್, ಬುಧವಾರ ಇಬ್ಬರ ಮೇಲೂ ದೂರನ್ನು ದಾಖಲು ಮಾಡಬೇಕು. ಇಲ್ಲವಾದಲ್ಲಿ ಅರಣ್ಯ ಇಲಾಖೆ ಮುಂಭಾಗ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.

- Advertisement -

Related news

error: Content is protected !!